ಬೆಂಗಳೂರು | ಕಾನೂನು ಉಲ್ಲಂಘಿಸಿದ ಇಬ್ಬರು ಇನ್ಸ್‌ಪೆಕ್ಟರ್‌ ಅಮಾನತು

Date:

Advertisements
  • ವೈದ್ಯರ ಮೇಲೆ ಜಾರ್ಜ್‌ಶೀಟ್‌ ಹಾಕಿದ್ದ ಇನ್ಸ್​​​​ಪೆಕ್ಟರ್​ ಮಂಜುನಾಥ್
  • ವೈದ್ಯರೊಬ್ಬರ ಮೇಲೆ ಡ್ರಗ್ಸ್‌ ಪ್ರಕರಣದಡಿ ಸುಳ್ಳು ಎಫ್ಐಆರ್ ದಾಖಲು

ಕಾನೂನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅಮಾನತು ಮಾಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಂಜುನಾಥ್ ಮತ್ತು ದೇವನಹಳ್ಳಿ ಠಾಣೆಯ‌ ಇನ್ಸ್​​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅಮಾನತುಗೊಂಡವರು.

ಈ ಹಿಂದೆ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಇನ್ಸ್​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅವರು ಇದ್ದರು. ಅವರ ಅವಧಿಯಲ್ಲಿ 2022ರಲ್ಲಿ ವೈದ್ಯರೊಬ್ಬರ ಮೇಲೆ ಡ್ರಗ್ಸ್‌ ಪ್ರಕರಣದಡಿ ಎಫ್ಐಆರ್ ದಾಖಲಿಸಿದ್ದರು.

Advertisements

ಬಳಿಕ ಅವರು ದೇವನಹಳ್ಳಿ ಠಾಣೆಗೆ ವರ್ಗಾವಣೆಯಾದ ನಂತರ ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

ವರ್ಗಾವಣೆ ಬಳಿಕ ಮಂಜುನಾಥ್ ಅವರು ವೈದ್ಯರ ಮೇಲೆ ಚಾರ್ಜ್‌ಶೀಟ್‌ ಹಾಕಿದ್ದರು. ಅಮಾಯಕ ವೈದ್ಯರ ಮೇಲೆ ಇಬ್ಬರು ಇನ್ಸ್‌ಪೆಕ್ಟರ್ ಸುಳ್ಳು ಪ್ರಕರಣ ದಾಖಲಿಸಿ ಬಳಿಕ ವೈದ್ಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇಬ್ಬರು ಕಾನೂನು ಉಲ್ಲಂಘಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ವರದಿ ನೀಡಿದ್ದರು.

ಡಿಸಿಪಿ ಅವರು ನೀಡಿದ ವರದಿ ಆಧರಿಸಿ ಇಬ್ಬರೂ ಇನ್ಸ್‌ಪೆಕ್ಟರ್‌ ಅನ್ನು ಪೊಲೀಸ್‌ ಆಯುಕ್ತ ಬಿ ದಯಾನಂದ ಅಮಾನತು ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X