ಬೆಂಗಳೂರು | ದ್ವಿಚಕ್ರ ವಾಹನದ ಟೈರ್ ಸ್ಪೋಟ; ಹಾಫ್‌ ಹೆಲ್ಮೆಟ್‌ ಧರಿಸಿದ್ದ ಯುವತಿ ಸಾವು

Date:

  • ಸುಲೋಚನಾ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ
  • ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಏಪ್ರಿಲ್ 2ರಂದು ಸಂಜೆ ದ್ವಿಚಕ್ರ ವಾಹನದ ಟೈರ್ ಸ್ಪೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.

ಸುಲೋಚನಾ(24) ಮೃತ ದುರ್ದೈವಿ. ಏಪ್ರಿಲ್ 2ರಂದು ಬೈಕ್‌ನಲ್ಲಿ ಯುವಕ-ಯುವತಿಯರಿಬ್ಬರು ಚಲಿಸುತ್ತಿದ್ದರು. ಬೈಕ್‌ನ ಟೈರ್‌ ಸ್ಪೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏ.3ರಂದು ಯುವತಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಹಾಫ್‌ ಹೆಲ್ಮೆಟ್‌ ಧರಿಸಿರುವುದು ಪ್ರಮುಖ ಕಾರಣವಾಗಿದೆ. ಪೂರ್ಣ ಹೆಲ್ಮೆಟ್ ಧರಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇಬ್ಬರು ಸಾಫ್ಟ್’ವೇರ್ ಇಂಜಿನಿಯರ್‌ಗಳಾಗಿದ್ದು, ಏಪ್ರಿಲ್ 2ರಂದು ಕೆಲಸ ಮುಗಿಸಿ ಕೋರಮಂಗಲದಿಂದ ಹೊಸಕೆರೆಹಳ್ಳಿ ನೈಸ್ ರಸ್ತೆ ಮೂಲಕ ಮನೆಗೆ ತೆರಳುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? Beautiful Bengaluru | ನಗರದ ಅಂದ ಹೆಚ್ಚಿಸಿದ ತಬುಬಿಯಾ ಬಂದದ್ದು ಎಲ್ಲಿಂದ? ಇಲ್ಲಿದೆ ನೋಡಿ

ಸುಲೋಚನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ...

ಪ್ರಧಾನಿ ಮೋದಿ ದ್ವೇಷ ಭಾಷಣ: ಕ್ರಮಕ್ಕೆ ಆಗ್ರಹಿಸಿ ನಾಗರಿಕ ಸಂಸ್ಥೆಗಳಿಂದ ಚುನಾವಣಾ ಆಯೋಗಕ್ಕೆ ದೂರು

ಕಳೆದ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...