ಬೆಂಗಳೂರು | ಬಿರುಗಾಳಿ ಸಹಿತ ಮಳೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ.

ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದ್ದು, ಬೆಂಗಳೂರಿನಿಂದ ವಿವಿಧೆಡೆ ಸಂಚರಿಸಬೇಕಿದ್ದ 6 ವಿಮಾನಗಳು ತಡವಾಗಿ ಹೊರಟಿವೆ. ಮಂಗಳವಾರ ಸಂಜೆ 4.05 ರಿಂದ 4.50ರ ವರೆಗೆ ವಿಮಾನ ಸಂಚಾರ ವ್ಯತ್ಯಯವಾಗಿತ್ತು.

ಚೆನ್ನೈ, ಹೈದರಾಬಾದ್,​ ಕೋಲ್ಕತ್ತಾ, ಜೋಧ್​ಪುರ​, ಮುಂಬೈ, ರಾಜ್​ಕೋಟ್​​, ದುಬೈ, ಪಾಟ್ನಾ, ಬರೇಲಿ ಮತ್ತು ಇಂದೋರ್​​ನಿಂದ ಬರುತ್ತಿದ್ದ ವಿಮಾನಗಳನ್ನು ಬೇರೆ ವಿಮಾನ ನಿಲ್ಧಾಣಗಳಿಗೆ ಕಳುಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾನಾಕಡೆಗೆ ತೆರಳಬೇಕಿದ್ದ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದೆ. ಮಳೆಯಿಂದಾಗಿ ವಿಮಾನದಲ್ಲೇ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಜನಜೀವನ ಅಸ್ತವ್ಯಸ್ತ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೆಂಪೇಗೌಡ ಸರ್ಕಲ್ ಬಳಿ ನಾಲ್ಕು ಅಡಿಗೂ ಹೆಚ್ಚು ನೀರು ನಿಂತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಮಳೆಯಿಂದ ರಸ್ತೆಗಳು ಸಂಪೂರ್ಣ ತುಂಬಿಹೋಗಿದ್ದು, ಸಂಚರಿಸಲು ರಸ್ತೆ ಕಾಣದೆ ವಾಹನ ಸವಾರರು ಪರದಾಡುವಂತಾಯಿತು.

ಮಂಗಳವಾರ ನಗರದ ಕೆಆರ್ ಮಾರ್ಕೆಟ್‌, ರಿಚ್ಮಂಡ್‌ ಸರ್ಕಲ್‌, ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ.

ಏಪ್ರಿಲ್ 5 ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ದಕ್ಷಿಣ ಒಳನಾಡು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ ಚಾಲನೆ | ಬಿಎಂಟಿಸಿ ಬಸ್‌ಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಕಂಡಕ್ಟರ್‌

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ...

ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕು; ಸಿಎಂ ಜೊತೆ ‘ಎದ್ದೇಳು ಕರ್ನಾಟಕ’ ನಿಯೋಗ ಚರ್ಚೆ

ನಾಡಿನ ಜನತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ....

ಬೆಂಗಳೂರು | ಕೆಐಎ ಒಂದನೇ ಟರ್ಮಿನಲ್‌ ಶೀಘ್ರ ನವೀಕರಣ

ಹದಿನೈದು ವರ್ಷಗಳಲ್ಲಿ 250 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದ ಟರ್ಮಿನಲ್...

ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜೂ. 6ರಂದು ನಡೆದಿದ್ದ ಘಟನೆ...