ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಎಕ್ಸ್‌ನಲ್ಲಿ ಅಭಿಯಾನ ಆರಂಭ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತ, ವ್ಹೀಲಿಂಗ್ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ದಕ್ಷಿಣ ವಿಭಾಗದ ಸಂಚಾರ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಅವರು ಟ್ವಿಟರ್‌ನಲ್ಲಿ- ಎಕ್ಸ್‌ನಲ್ಲಿ #DCPSOUTHLISTENS (ಡಿಸಿಪಿ ಸೌಥ್ ಲಿಸನ್ಸ್‌) ಎಂಬ ಹ್ಯಾಶ್‌ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ.

- Advertisement -

ಈ ಅಭಿಯಾನದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಅವುಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈ ಅಭಿಯಾನವು ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆಗಳನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಹೆಚ್ಚುತ್ತಿರುವ ಬೈಕ್ ಸ್ಟಂಟ್‌ಗಳು ಮತ್ತು ರೋಡ್ ರೇಜ್ ಘಟನೆಗಳ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸರು ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಆದರೂ, ಹೆಚ್ಚು ಪರಿಣಾಮಕಾರಿ ನಿರ್ವಹಣೆಯ ಅಗತ್ಯವನ್ನು ಗುರುತಿಸಿ, ಆನ್‌ಲೈನ್ ಅಭಿಯಾನವನ್ನು ಪರಿಚಯಿಸಲಾಗಿದೆ” ಎಂದು ಶಿವಪ್ರಕಾಶ ದೇವರಾಜು ಹೇಳಿದರು.

“ಹೊಸ ವರ್ಷಾಚರಣೆ ಸಮೀಪಿಸುತ್ತಿರುವುದರಿಂದ ಬೈಕ್ ಸ್ಟಂಟ್‌ಗಳು ಮತ್ತು ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚಾಗಲಿವೆ. ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ರಸ್ತೆ ತೊಂದರೆಗಳು ಗಂಭೀರ ಅಪಾಯವಾಗುವುದನ್ನು ತಡೆಯಲು ನಿರ್ದಿಷ್ಟ ಹ್ಯಾಶ್‌ಟ್ಯಾಗ್ ಅನ್ನು ಪರಿಚಯಿಸಲಾಗಿದೆ” ಎಂದು ಹೇಳಿದರು.

“ಇಲಾಖೆಯಿಂದ ಸುಮಾರು 30 ಸಿಬ್ಬಂದಿ ಪ್ರಸ್ತುತ ದೂರುಗಳ ಮೇಲ್ವಿಚಾರಣೆಯಲ್ಲಿ ತೊಡಗಿದ್ದಾರೆ. ಅಧಿಕೃತವಾಗಿ ದೂರು ದಾಖಲಿಸುವ ಮೊದಲು ರೆಕಾರ್ಡಿಂಗ್ ಅನ್ನು ಪರಿಶೀಲಿಸುತ್ತಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುವ ಮೊದಲು ಪ್ರತಿ ದೂರನ್ನು ಕೂಲಂಕಷವಾಗಿ ಪರಿಶೀಲಿಸಿ, ಮೌಲ್ಯೀಕರಿಸಲಾಗುತ್ತದೆ. ಇದು ಪ್ರಕ್ರಿಯೆಯಾಗಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | ‘ನಮ್ಮ ಕಾರ್ಗೋ-ಟ್ರಕ್ ಸೇವೆ’ ಯೋಜನೆಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ

“ಅಭಿಯಾನದ ಅಂಗವಾಗಿ ಗುರುವಾರ 59 ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಂಗಳವಾರ ಮತ್ತು ಬುಧವಾರದ ನಡುವೆ ಅಜಾಗರೂಕತೆಯಿಂದ ಚಾಲನೆ ಮಾಡಿದ 51 ಪ್ರಕರಣಗಳು ದಾಖಲಾಗಿವೆ. 692 ವಾಹನಗಳನ್ನು ಪರೀಕ್ಷಿಸಲಾಯಿತು. ಕುಡಿದು ವಾಹನ ಚಲಾಯಿಸಿದ 28 ಪ್ರಕರಣಗಳನ್ನು ದಾಖಲಾಗಿವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...