ಬೆಂಗಳೂರು | ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ‘ಮತದಾನದ ಹಬ್ಬ’

Date:

  • ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ‘ಮತದಾನದ ಹಬ್ಬ’ ಸಹಕಾರಿ
  • ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆ, ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಮತದಾನದ ಹಬ್ಬ’ (ಓಟ್ ಫೆಸ್ಟ್) ಹೆಸರಿನ ಕಾರ್ಯಕ್ರಮ ನಡೆಸಿವೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಮತದಾನ ಯಶಸ್ವಿಗೊಳಿಸಲು ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು. ಯುವಸಮೂಹವು ತಮ್ಮ ನೆರೆಹೊರೆಯ ಪ್ರದೇಶದ ಜನರನ್ನು ಮತದಾನಕ್ಕೆ ಪ್ರೇರೇಪಿಸುವ ಮೂಲಕ ಈ ಬಾರಿಯ ಚುನಾವಣೆಯನ್ನು ಯಶಸ್ವಿಗೊಳಿಸಬೇಕು” ಎಂದರು.

“ಮೇ 10ರಂದು ತಪ್ಪದೇ ಎಲ್ಲರೂ ತಮ್ಮ ಮತಗಟ್ಟೆಗೆ ಭೇಟಿ ನೀಡಿ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಹಾಗೂ ಉತ್ಸಾಹ ಮೂಡಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಈ ಚುನಾವಣೆಯಲ್ಲಿ ಮೊದಲನೇ ಬಾರಿ ಮತದಾನ ಮಾಡುವ ಯುವಜನರ ಸಂಖ್ಯೆ 1 ಲಕ್ಷ ಮೀರಿದೆ. 18 ತುಂಬಿರುವ ಯುವಜನರು ಮೊದಲನೇ ಬಾರಿಗೆ ಮತದಾನ ಮಾಡಲು ಮುಂದೆ ಬರಬೇಕಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮತದಾನದ ಬಗ್ಗೆ ಅರಿವು ಮೂಡಿಸಲು ಕಾಲೇಜುಗಳಲ್ಲಿ 4,000 ಎಲೆಕ್ಟೋರಲ್ ಲಿಟ್ರೆಸಿ ಕ್ಲಬ್‌ಗಳನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳಿಂದ 18 ತುಂಬಿರುವ ಯುವಜನರ ಪಟ್ಟಿಯನ್ನು ಪಡೆದು ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ಮತದಾನ ಮಾಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ” ಎಂದರು.

“ವಿಧಾನಸಭಾ ಚುನಾವಣೆಯ ರಾಷ್ಟ್ರೀಯ ರಾಯಭಾರಿಯಾಗಿರುವ ರಾಹುಲ್ ದ್ರಾವಿಡ್ ರವರು ಮತದಾನ ಹಕ್ಕನ್ನು ಚಲಾಯಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ. ಮತದಾನದ ಮೂಲ ಕರ್ತವ್ಯದಲ್ಲಿ ಎಲ್ಲರೂ ಭಾಗವಹಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ”ಬೆಂಗಳೂರು ಜಾಗತಿಕ ನಗರವಾಗಿದ್ದು, ಗರಿಷ್ಠ ಪ್ರಮಾಣದಲ್ಲಿ ಮತದಾನವನ್ನು ದಾಖಲಿಸುವ ಗುರಿಯನ್ನು ಸಾಧಿಸಬೇಕಿದೆ. ನಗರದ ಮತದಾನ ಪ್ರಮಾಣ ಕಡಿಮೆಯಿದ್ದು, ಈ ಬಾರಿಯ ಚುನಾವಣೆಯಲ್ಲಿ ಈ ಪ್ರಮಾಣವನ್ನು ಸುಧಾರಿಸಲು ಹಾಗೂ ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ಇಂದಿನ ಕಾರ್ಯಕ್ರಮ ಪೂರಕವಾಗಿದೆ” ಎಂದರು.

ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಉಪಯುಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಮೂಲಕ ‘ಓಟ್ ಫೆಸ್ಟ್’ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ವಿಶೇಷ ಚುನಾವಣಾಧಿಕಾರಿ ಎ.ವಿ.ಸೂರ್ಯಸೇನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...