ಬೆಂಗಳೂರು | ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ‘ಮತದಾನದ ಹಬ್ಬ’

Date:

  • ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ‘ಮತದಾನದ ಹಬ್ಬ’ ಸಹಕಾರಿ
  • ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆ, ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಮತದಾನದ ಹಬ್ಬ’ (ಓಟ್ ಫೆಸ್ಟ್) ಹೆಸರಿನ ಕಾರ್ಯಕ್ರಮ ನಡೆಸಿವೆ.

- Advertisement -

ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಮತದಾನ ಯಶಸ್ವಿಗೊಳಿಸಲು ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು. ಯುವಸಮೂಹವು ತಮ್ಮ ನೆರೆಹೊರೆಯ ಪ್ರದೇಶದ ಜನರನ್ನು ಮತದಾನಕ್ಕೆ ಪ್ರೇರೇಪಿಸುವ ಮೂಲಕ ಈ ಬಾರಿಯ ಚುನಾವಣೆಯನ್ನು ಯಶಸ್ವಿಗೊಳಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಮೇ 10ರಂದು ತಪ್ಪದೇ ಎಲ್ಲರೂ ತಮ್ಮ ಮತಗಟ್ಟೆಗೆ ಭೇಟಿ ನೀಡಿ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಹಾಗೂ ಉತ್ಸಾಹ ಮೂಡಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಈ ಚುನಾವಣೆಯಲ್ಲಿ ಮೊದಲನೇ ಬಾರಿ ಮತದಾನ ಮಾಡುವ ಯುವಜನರ ಸಂಖ್ಯೆ 1 ಲಕ್ಷ ಮೀರಿದೆ. 18 ತುಂಬಿರುವ ಯುವಜನರು ಮೊದಲನೇ ಬಾರಿಗೆ ಮತದಾನ ಮಾಡಲು ಮುಂದೆ ಬರಬೇಕಿದೆ” ಎಂದು ಹೇಳಿದರು.

“ಮತದಾನದ ಬಗ್ಗೆ ಅರಿವು ಮೂಡಿಸಲು ಕಾಲೇಜುಗಳಲ್ಲಿ 4,000 ಎಲೆಕ್ಟೋರಲ್ ಲಿಟ್ರೆಸಿ ಕ್ಲಬ್‌ಗಳನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳಿಂದ 18 ತುಂಬಿರುವ ಯುವಜನರ ಪಟ್ಟಿಯನ್ನು ಪಡೆದು ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ಮತದಾನ ಮಾಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ” ಎಂದರು.

“ವಿಧಾನಸಭಾ ಚುನಾವಣೆಯ ರಾಷ್ಟ್ರೀಯ ರಾಯಭಾರಿಯಾಗಿರುವ ರಾಹುಲ್ ದ್ರಾವಿಡ್ ರವರು ಮತದಾನ ಹಕ್ಕನ್ನು ಚಲಾಯಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ. ಮತದಾನದ ಮೂಲ ಕರ್ತವ್ಯದಲ್ಲಿ ಎಲ್ಲರೂ ಭಾಗವಹಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ”ಬೆಂಗಳೂರು ಜಾಗತಿಕ ನಗರವಾಗಿದ್ದು, ಗರಿಷ್ಠ ಪ್ರಮಾಣದಲ್ಲಿ ಮತದಾನವನ್ನು ದಾಖಲಿಸುವ ಗುರಿಯನ್ನು ಸಾಧಿಸಬೇಕಿದೆ. ನಗರದ ಮತದಾನ ಪ್ರಮಾಣ ಕಡಿಮೆಯಿದ್ದು, ಈ ಬಾರಿಯ ಚುನಾವಣೆಯಲ್ಲಿ ಈ ಪ್ರಮಾಣವನ್ನು ಸುಧಾರಿಸಲು ಹಾಗೂ ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ಇಂದಿನ ಕಾರ್ಯಕ್ರಮ ಪೂರಕವಾಗಿದೆ” ಎಂದರು.

ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಉಪಯುಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಮೂಲಕ ‘ಓಟ್ ಫೆಸ್ಟ್’ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ವಿಶೇಷ ಚುನಾವಣಾಧಿಕಾರಿ ಎ.ವಿ.ಸೂರ್ಯಸೇನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...