ಬೆಂಗಳೂರು | 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು; ಕೆಲಸದಾಕೆ ಬಂಧನ

Date:

Advertisements

₹20 ಲಕ್ಷ ಮೌಲ್ಯದ 374 ಗ್ರಾಂ ಚಿನ್ನಾಭರಣ ಕದ್ದಿದ್ದ ಮನೆಗೆಲಸ ಮಾಡುವ ಮಹಿಳೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಮ್ಮ‌ (53) ಬಂಧಿತ ಆರೋಪಿ. ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿರುವ ರಂಜಿತಾ ಎಂಬುವವರ ಮನೆಯಲ್ಲಿ ಲಕ್ಷ್ಮಮ್ಮ ಕಳೆದ 9 ತಿಂಗಳಿನಿಂದ ಮನೆಗೆಲಸ ಮಾಡಿಕೊಂಡಿದ್ದರು.

ರಂಜಿತಾ ತಮ್ಮ ಮಾವನಿಗೆ ಚಿನ್ನದ ಸರ್ ಕೊಡುವ ಸಲುವಾಗಿ ಕರ್ಬೋರ್ಡ್‌ ತೆಗೆದು ನೋಡಿದಾಗ ಚಿನ್ನ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಮನೆ ಕೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿ ಮನೆ ಮಾಲಕಿ ರಂಜಿತಾ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisements

ರಂಜಿತಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಕ್ಷಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಕ್ಷ್ಮಮ್ಮ ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ‘ಹೆಚ್‌ಎಸ್‌ಆರ್‌ಪಿ’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರವರೆಗೂ ಅವಕಾಶ; ಸಾರಿಗೆ ಇಲಾಖೆ

ಚಿನ್ನ ಕದ್ದ ಕಳ್ಳರ ಬಂಧನ

ರಾತ್ರೋರಾತ್ರಿ ಶ್ರೀಮಂತರಾಗಬೇಕು ಎಂಬ ದುರಾಸೆಯಿಂದ ಚಿನ್ನ ಕಳ್ಳತನಕ್ಕೆ ಹೊಂಚು ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಸುಹೇಲ್, ಯೂಸೂಫ್, ಮಹಮ್ಮದ್ ರಿಜ್ವಾನ್ ಹಾಗೂ ಸೈಯ್ಯದ್ ಅಜ್ಮತ್ ಬಂಧಿತ ಆರೋಪಿಗಳು. ವೃತ್ತಿಯಲ್ಲಿ‌ ಸುಹೇಲ್ ಕಾರ್ಪೆಂಟರ್​, ಯೂಸೂಫ್ ವೆಲ್ಡಿಂಗ್, ಮಹಮ್ಮದ್ ರಿಜ್ವಾನ್ ಪೇಂಟರ್, ಸೈಯ್ಯದ್ ಅಜ್ಮತ್ ಕಾರ್ ಸೀಟ್ ಕವರ್ ಹೊಲಿಯುವ ಕೆಲಸ ಮಾಡುತ್ತಿದ್ದರು.

ಇವರಿಗೆ ಹೆಚ್ಚಾಗಿ ಆದಾಯ ಬರುತ್ತಿರಲಿಲ್ಲ. ಹೀಗಾಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ನಾಲ್ಕು ಜನ ಸೇರಿ ಚಿನ್ನಾಭರಣ ಅಂಗಡಿಯನ್ನು ಕಳ್ಳತನ ಮಾಡಲು ಹೊಂಚು ಹಾಕಿದ್ದರು. ಅದರಂತೆ ಕದಿರೇನಹಳ್ಳಿ ಪಾರ್ಕ್ ರಸ್ತೆಯಲ್ಲಿರುವ ಸೂಜರ್ ಜ್ಯುವೆಲ್ಲರ್ಸ್​​​ಗೆ ಕಳ್ಳತನ ಮಾಡಲು ತೆರಳಿದ್ದರು. ಈ ವೇಳೆ, ಅಂಗಡಿಯಲ್ಲಿ ಚಿನ್ನ ಬದಲು ಬೆಳ್ಳಿ ಇತ್ತು. ಬಳಿಕ 30 ಕೆಜಿ ಬೆಳ್ಳಿಯನ್ನು ಕಳ್ಳತನ ಮಾಡಿದ್ದರು.

ಕಳ್ಳತನವಾದ ಬಗ್ಗೆ ತಿಳಿದ ಮಾಲೀಕ ಪೊಲೀಸರಿಗೆ ದೂರು ನೀಡಿದ್ದನು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X