- ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ ಅಪ್ಲಿಕೇಷನ್ನಲ್ಲಿ ದೂರು ದಾಖಲಿಸಿ
- ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ
ಮೇ 5ರಂದು ಬುದ್ಧ ಪೂರ್ಣಿಮಾ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.
ಮಾದರಿ ವಿದ್ಯುನ್ಮಾನ ಮತಯಂತ್ರ ಬಳಸಿ ಮತ ಚಲಾಯಿಸುವ ಬಗ್ಗೆ ಯುವ ಮತದಾರರಿಗೆ ಅರಿವು
ದಕ್ಷಿಣ ವಲಯದ ಬಸವನಗುಡಿ ಕ್ಷೇತ್ರದ ಗವಿಪುರಂನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬುಧವಾರದಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು ಎಂದು ಬಿಬಿಎಂಪಿ ಹೇಳಿದೆ.
ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು ಆರ್.ಲಕ್ಷ್ಮೀದೇವಿ ಮಾತನಾಡಿ, “ಎಲ್ಲ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ (C-VIGIL) ಅಪ್ಲಿಕೇಷನ್ನಲ್ಲಿ ದೂರು ದಾಖಲಿಸಲು” ತಿಳಿಸಿದರು.
ಕಾರ್ಯಕ್ರಮದಲ್ಲಿ ತರಬೇತುದಾರ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.