ವಿಟ್ಟಸಂದ್ರದ ಕಸದ ರಾಶಿ ತೆರವುಗೊಳಿಸದ ಬಿಬಿಎಂಪಿ; ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ ಲೋಕಾಯುಕ್ತ

Date:

Advertisements
  • ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ
  • ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು

ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್‌ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ವಿಫಲವಾಗಿದ್ದು, ಈ ವಿರುದ್ಧ ಕರ್ನಾಟಕ ಲೋಕಾಯುಕ್ತರು ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ್ದಾರೆ.

“ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವುದು ಮಾತ್ರವಲ್ಲದೆ, ಆ ಪ್ರದೇಶದ ನಿವಾಸಿಗಳಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ” ಎಂಬ ವರದಿಗಳ ನಂತರ ಉಪ ಲೋಕಾಯುಕ್ತರು ದೂರು ದಾಖಲಿಸಿಕೊಂಡಿದ್ದಾರೆ.

ಉಪ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಜಂಟಿ ಆಯುಕ್ತ ಬೊಮ್ಮನಹಳ್ಳಿ ಹಾಗೂ ಇತರ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

Advertisements

ಕಸವನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವುದು ಕರ್ತವ್ಯಲೋಪ ಮಾತ್ರವಲ್ಲದೆ ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 ರ ಸೆಕ್ಷನ್ 2 (1) ರೊಳಗೆ ದುರಾಡಳಿತಕ್ಕೆ ಸಮಾನವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

ಯಲಚೇನಹಳ್ಳಿ ಕೆರೆಗೆ ಕೊಳಚೆ ನೀರು ಮತ್ತು ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಅನಗತ್ಯ ತ್ಯಾಜ್ಯವನ್ನು ತಡೆಯಲು ವಿಫಲವಾದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಬಿಬಿಎಂಪಿ ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X