ಬಿಬಿಎಂಪಿ | 225 ವಾರ್ಡ್‌ ವಿಂಗಡಣೆಗೆ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 225 ವಾರ್ಡ್‌ಗಳನ್ನು ರಚಿಸಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿತ್ತು. ಇದೀಗ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಹಾಗೂ ಸಲಹೆಗಳು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿವೆ.

- Advertisement -

ಬಿಬಿಎಂಪಿಯ 243 ವಾರ್ಡ್‌ಗಳಿಂದ 225ಕ್ಕೆ ವಾರ್ಡ್‌ಗಳ ಸಂಖ್ಯೆಯನ್ನು ಸರ್ಕಾರ ಇಳಿಕೆ ಮಾಡಿತ್ತು. ಆ.18 ರಂದು ವಾರ್ಡ್‌ಗಳ ಗಡಿ ಗುರುತು ಮಾಡಿ ಅಧಿಸೂಚನೆ ಹೊರಡಿಸಿತ್ತು. ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಸೆ.1 ರವರೆಗೆ ಅವಕಾಶ ನೀಡಲಾಗಿತ್ತು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅಂಚೆ ಮೂಲಕ ಮಾತ್ರವೇ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಲು ಸರ್ಕಾರ ನಿಯಮ ವಿಧಿಸಿತ್ತು. ಇದಕ್ಕೆ ಹಲವರು ಆನ್‌ಲೈನ್ ಮುಖಾಂತರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದರು.

ಇದೀಗ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಹಾಗೂ ಸಲಹೆಗಳು ಬಂದಿದ್ದು, ಅದರಲ್ಲಿ ಗಡಿ, ವಾರ್ಡ್‌ಗಳ ಹೆಸರು, ಪ್ರದೇಶದ ಹೆಸರು ನಮೂದಾಗದಿರುವುದು ಪ್ರಮುಖ ಆಕ್ಷೇಪಣೆಯಾಗಿದೆ. ಗಡಿಗಳನ್ನು ಒಂದು ವಿಧಾನಸಭಾ ಕ್ಷೇತ್ರದೊಳಗೆ ಸೇರಿಸುವಂತೆ ಕೇಳಲಾಗಿದೆ.

“ಶುಕ್ರವಾರ ಸಾಯಂಕಾಲದವರೆಗೂ ಅಂಚೆ ಮೂಲಕ ಬಂದ ಆಕ್ಷೇಪಣೆಗಳನ್ನೂ ಸ್ವೀಕರಿಸಲಾಗಿದೆ. ಎಲ್ಲವನ್ನೂ ಒಟ್ಟುಗೂಡಿಸಿ, ವಿಷಯವಾರು ವರ್ಗಾವಣೆ ಮಾಡಲಾಗುತ್ತದೆ. ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲನೆ ಮಾಡಿ ಇನ್ನೊಂದು ವಾರದಲ್ಲಿ ವಾರ್ಡ್‌ಗಳ ಅಂತಿಮ ಅಧಿಸೂಚನೆ ಹೊರಬೀಳಲಿದೆ” ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳಿದರು.

ಸರ್ಕಾರ ಈ ಆಕ್ಷೇಪಣೆಗೆ ನೀಡಿದ ಅವಧಿ ವಿಸ್ತರಿಸುವ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ. ಏಕೆಂದರೆ, ಹೈಕೋರ್ಟ್ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದರಿಂದ ಸೆಪ್ಟೆಂಬರ್ 18 ರೊಳಗೆ ವಾರ್ಡ್ ಗಡಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಭಾಗವತ್‌ ಟೀಕಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಅಸ್ತಿತ್ವದಲ್ಲಿರುವ ಮತ್ತು ವಿಂಗಡಣೆಯಾದ ವಾರ್ಡ್, ವಾರ್ಡ್ ವಿಸ್ತೀರ್ಣ, ಜನಸಂಖ್ಯೆ, ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರದ ವಿವರಗಳನ್ನು ನೀಡುವ ನಕ್ಷೆಯನ್ನು ಅಪ್‌ಲೋಡ್ ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ 198 ಇದ್ದ ವಾರ್ಡ್‌ ಸಂಖ್ಯೆಯನ್ನು 243ಕ್ಕೆ ಏರಿಕೆ ಮಾಡಿತ್ತು. ಆಗ ವಾರ್ಡ್ ವಿಂಗಡಣೆಯಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಿ, ಕಾಂಗ್ರೆಸ್‌ ಸರ್ಕಾರವು ಹೈಕೋರ್ಟ್‌ನಲ್ಲಿ ಕಾಲಾವಕಾಶ ಕೋರಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...