- ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಎಂಬ ದ್ಯೇಯದೊಂದಿಗೆ ಆರಂಭ
- ಅತ್ಯುತ್ತಮ ಆರ್.ಆರ್.ಆರ್ ನಗರ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವ
ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕರ್ನಾಟಕದಲ್ಲಿ ಅತ್ಯುತ್ತಮ ಆರ್.ಆರ್.ಆರ್(ರೆಡ್ಯೂಸ್, ರಿಯೂಸ್ ಹಾಗೂ ರಿಸೈಕಲ್) ನಗರವಾಗಿ ಆಯ್ಕೆಯಾಗಿದೆ.
ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯವು ಕರ್ನಾಟಕ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ಧ್ಯೇಯದೊಂದಿಗೆ ರೆಡ್ಯೂಸ್, ರಿಯೂಸ್ ಹಾಗೂ ರಿಸೈಕಲ್-ಆರ್.ಆರ್.ಆರ್ ಕೇಂದ್ರಗಳನ್ನು ಸ್ಥಾಪಿಸಲು ತಿಳಿಸಿತ್ತು.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಎಂಬ ಧ್ಯೇಯದೊಂದಿಗೆ ಮೇ 15ರಿಂದ ಪರಿಸರ ದಿನವಾದ ಜೂನ್ 5ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಅದರಂತೆ, ಬಿಬಿಎಂಪಿ ವ್ಯಾಪ್ತಿಯ 49 ವಾರ್ಡ್ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಕೇಂದ್ರಗಳಲ್ಲಿ ನೀಡಿದರೆ ಅದನ್ನು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.
ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ವಿಭಿನ್ನ ಆಯ್ಕೆ ಮಾನದಂಡಗಳ ಆಧಾರದ ಮೇಲೆ ರಾಜ್ಯವು ಬೆಂಗಳೂರು ನಗರವನ್ನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆರ್.ಆರ್.ಆರ್ ನಗರಗಳಲ್ಲಿ ಒಂದಾಗಿ ಆಯ್ಕೆ ಮಾಡಿದೆ.
ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಮಂಜುಶ್ರೀ ಅವರು ‘ಅತ್ಯುತ್ತಮ ಆರ್.ಆರ್.ಆರ್ ನಗರ’ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು
ಈ ವೇಳೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ್ ಕಬಾಡೆ, ಘನತ್ಯಾಜ್ಯ ನಿರ್ವಹಣೆ ವಿಭಾಗದ ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಚೀಪ್ ಮಾರ್ಷಲ್ ರಾಜಬೀರ್ ಸಿಂಗ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.