ಪ್ರತಿಭಟನೆಗೆ ಮಣಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ: ವಾಹನಗಳ ಪ್ರವೇಶ ಶುಲ್ಕ ರದ್ದು

Date:

Advertisements

ಕಳೆದ ಒಂದು ದಿನದ ಹಿಂದಷ್ಟೆ ಖಾಸಗಿ ಹಾಗೂ ವಾಣಿಜ್ಯ ವಾಹನಗಳಿಗೆ ನೂತನ ಶುಲ್ಕ ದರಗಳನ್ನು ವಿಧಿಸಿ ಆದೇಶ ಹೊರಡಿಸಿದ್ದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸಂಸ್ಥೆ ಕಾರು ಚಾಲಕರು ಹಾಗೂ ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಆದೇಶವನ್ನು ಹಿಂಪಡೆದಿದೆ.

ನೂತನ ಶುಲ್ಕ ದರಗಳ ಯೋಜನೆಯನ್ನು ಕೈಬಿಟ್ಟಿರುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸಂಸ್ಥೆಯ ಮೂಲಗಳು ದೃಢಪಡಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಆಟ, ಹುಚ್ಚಾಟ, ಜೂಜಾಟ ಮತ್ತು ಧೋನಿಯ ದುಗುಡ

Advertisements

ಖಾಸಗಿ ವಾಹನಗಳು ಹಾಗೂ ವಾಣಿಜ್ಯ ವಾಹನಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದ್ವಾರಕ್ಕೆ ಪ್ರವೇಶಿಸಬೇಕಾದರೆ ಮೊದಲ 7ರಿಂದ 14 ನಿಮಿಷಗಳವರೆಗೆ ಕ್ರಮವಾಗಿ 150 ಹಾಗೂ 300 ರೂ. ಶುಲ್ಕವನ್ನು ಪಾವತಿಸಬೇಕಿತ್ತು. ಹಾಗೆಯೇ ಪ್ರಾಧಿಕಾರವು ಬಸ್ಸುಗಳಿಗೆ 600 ಹಾಗೂ ಟೆಂಪೋ ಟ್ರಾವಲರ್‌ಗಳಿಗೆ 300 ರೂ. ಶುಲ್ಕ ನಿಗದಿಪಡಿಸಿತ್ತು. ಸಮಯ ಹೆಚ್ಚಾದಂತೆ ಶುಲ್ಕ ಕೂಡ ಹೆಚ್ಚಾಗುತ್ತಿತ್ತು.

ಶುಲ್ಕವು ವಿಮಾನ ನಿಲ್ದಾಣದ ಟರ್ಮಿನಲ್‌ 1 ಹಾಗೂ ಟರ್ಮಿನಲ್‌ 2ರ ದ್ವಾರಕ್ಕೆ ಅನ್ವಯಿಸಲಾಗಿತ್ತು. ನೂತನ ಶುಲ್ಕ ದರ ವಿಧಿಸಿರುವುದನ್ನು ಪ್ರತಿಭಟಿಸಿ ಓಲಾ, ಊಬರ್‌ ಸೇರಿದಂತೆ ಕಾರು ಚಾಲಕರು ಹಾಗೂ  ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದ ವಿಮಾನ ನಿಲ್ದಾಣ ಪ್ರಾಧಿಕಾರಿ ಶುಲ್ಕ ಆದೇಶವನ್ನು ಮಂಗಳವಾರ (ಮೇ.21) ಹಿಂಪಡೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X