ನಾಳೆ (ಸೆ.11) ಬೆಂಗಳೂರು ಬಂದ್: ಇಂದು ರಾತ್ರಿಯಿಂದಲೇ ಖಾಸಗಿ ಸಾರಿಗೆ ವಾಹನಗಳ ಸಂಚಾರ ಸ್ಥಗಿತ

Date:

Advertisements

ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ (ಸೆ.11) ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮತ್ತು ಕರ್ನಾಟಕ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.       

ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್ ನಿರ್ವಾಹಕರು ಮತ್ತು ಆಟೋ ರಿಕ್ಷಾ ಚಾಲಕರು ಸೇರಿದಂತೆ ಒಟ್ಟು 32 ಖಾಸಗಿ ಸಾರಿಗೆ ಸಂಘಗಳನ್ನು ಒಳಗೊಂಡಿರುವ ಒಕ್ಕೂಟವು ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ ಮಧ್ಯರಾತ್ರಿಯವರೆಗೆ ರಸ್ತೆಗಿಳಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದೆ. ಶಕ್ತಿ ಯೋಜನೆಯು ತಮ್ಮ ವೃತ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಪದೇ ಪದೇ ಚರ್ಚೆಗಳ ಹೊರತಾಗಿಯೂ ರಾಜ್ಯ ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎನ್ನುವುದು ಅವರ ವಾದ.

ಖಾಸಗಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಂದ್ ಕರೆಗೆ ಖಾಸಗಿ ಶಾಲಾ ಬಸ್‌ಗಳ ಚಾಲಕರು, ವ್ಯಾನ್ ಮಾಲೀಕರು ಹಾಗೂ ಇತರೆ ವಾಹನಗಳ ಚಾಲಕರೂ ಕೂಡ ಬೆಂಬಲ ನೀಡಿದ್ದು, ಇದು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ನಗರದ ಕೆಲ ಶಾಲೆಗಳು ಸೋಮವಾರ ರಜೆ ಘೋಷಣೆ ಮಾಡಿವೆ.

Advertisements

ಬಂದ್ ಪ್ರಯುಕ್ತ ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಮತ್ತು ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಜಯನಗರ, ಕಲಾಸಿಪಾಳ್ಯ ಮತ್ತು ಕಂಟೋನ್ಮೆಂಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಂದ್‌ಗೆ ಬೆಂಬಲ ನೀಡುವಂತೆ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಮನವಿ ಮಾಡಿದ್ದಾರೆ.

ಖಾಸಗಿ ವಾಹನಗಳ ಬಂದ್‌ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಚ್ಚುವರಿ ಬಸ್‌ಗಳನ್ನು ಬಿಡಲು ತಯಾರಿ ನಡೆಸಿದೆ. ಮುಷ್ಕರದಿಂದಾಗಿ ಉಂಟಾಗಿರುವ ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು 50 ವೋಲ್ವೋ ಸೇರಿದಂತೆ 500 ಹೆಚ್ಚುವರಿ ಬಸ್ ನಿಯೋಜಿಸಲು ಬಿಎಂಟಿಸಿ ಯೋಜಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೇಡಿಕೆ ಹೆಚ್ಚಾದರೆ ನಿಗಮವು ತನ್ನ ವಿಮಾನ ನಿಲ್ದಾಣ ಬಸ್ ಸೇವೆಗಳನ್ನು ಹೆಚ್ಚಿಸಲು ಪರಿಗಣಿಸುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ: ಚಂದ್ರಬಾಬು ನಾಯ್ಡು ಬಂಧನ: ಆಂಧ್ರದಲ್ಲಿ ಮುಂದೇನಾಗಲಿದೆ? 

ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗಿಳಿಯಬಹುದಾದರೂ, ಬೆಂಗಳೂರಿನಲ್ಲಿ ಒಟ್ಟಾರೆ ಸಂಚಾರವು ಸಾಮಾನ್ಯಕ್ಕಿಂತ ಕಡಿಮೆ ಇರಬಹುದು. ಅಂದರೆ ಸಂಚಾರದ ಹರಿವು ಸಾಮಾನ್ಯಕ್ಕಿಂತ ಸ್ವಲ್ಪ ವೇಗವಾಗಿರಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.  

ಏನಿರುವುದಿಲ್ಲ: ಆಟೋ ರಿಕ್ಷಾಗಳು, ಟ್ಯಾಕ್ಸಿಗಳು, ವಿಮಾನ ನಿಲ್ದಾಣ ಟ್ಯಾಕ್ಸಿಗಳು, ಮ್ಯಾಕ್ಸಿ ಕ್ಯಾಬ್‌ಗಳು, ಖಾಸಗಿ ಬಸ್ಸುಗಳು, ಶಾಲಾ ವಾಹನಗಳು ಮತ್ತು ಕಾರ್ಪೊರೇಟ್ ವಾಹನಗಳು ರಸ್ತೆಗಿಳಿಯುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X