ಬೆಂಗಳೂರು | ಮನೆಯಲ್ಲಿ ಸಿಲಿಂಡರ್ ಸ್ಫೋಟ; ದಂಪತಿಗಳ ಸ್ಥಿತಿ ಗಂಭೀರ

Date:

Advertisements

ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಪುಲಿಕೇಶಿನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಿದ್ದೇಶ್ ಮತ್ತು ಅವರ ಪತ್ನಿ ಶಿಶಿಲಾ ಅವರು ಗಾಯಗೊಂಡಿದ್ದಾರೆ. ಇಬ್ಬರ ಪರಿಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಹಾ ಮಾಡಲೆಂದು ಶಿಶಿಲಾ ಅವರು ಅಡುಗೆ ಮನೆಗೆ ತೆರಳಿ, ಗ್ಯಾಸ್ ಸ್ಟೌವ್ ಹಚ್ಚಿದ್ದಾರೆ. ಸ್ಟೌವ್ ಹಚ್ಚಿದ ಕೂಡಲೇ ಸಿಲಿಂಡರ್ ಸ್ಪೋಟಗೊಂಡಿದೆ. ಅಡುಗೆ ಮನೆಯಲ್ಲಿದ್ದ ಶಿಶಿಲಾ ಅವರಿಗೆ ಬೆಂಕಿ ತುಗುಲಿದೆ. ಸಮೀಪವೇ ಇದ್ದ ಸಿದ್ದೇಶ್ ಅವರಿಗೂ ಬೆಂಕಿ ತಲುಗಿದೆ. ಇಬ್ಬರಿಗೂ ತೀವ್ರ ಗಾಯಗಳಾಗಿವೆ.

Advertisements

ಶಿಶಿಲಾ ಅವರ ದೇಹದ 90% ಭಾಗದಲ್ಲಿ ಸುಟ್ಟ ಗಾಯಗಳಾಗಿವೆ. ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸಿದ್ದೇಶ್ ಅವರ ದೇಹದ 45% ಭಾಗದಲ್ಲಿ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ, ರಾಯಚೂರು ಜಿಲ್ಲೆಯ ಏಗನೂರು ಗ್ರಾಮದಲ್ಲಿಯೂ ಸಿಲಿಂಡರ್‌ ಸ್ಫೋಟಿಸಿದ್ದ ಘಟನೆ ನಡೆದಿತ್ತು. ಗ್ರಾಮದ ನರಸಿಂಹಲು ಅವರು ಗುಡಿಸಲಿನಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ, ನರಸಿಂಹಲು ಮತ್ತು ಅವರ ಪತ್ನಿ ಗುಡಿಸಲಿನಲ್ಲಿಯೇ ಇದ್ದರು, ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆಯೇ ಗುಡಿಸಲಿನಿಂದ ಹೊರ ಓಡಿ ಬಂದಿದ್ದು, ಅಪಾಯದಿಂದ ಬಜಾವಾಗಿದ್ದರು. ಆದರೆ, ಐದು ಕುರಿಗಳು ಜೀವಂತವಾಗಿ ಸುಟ್ಟುಹೋಗಿದ್ದವು. ಅಲ್ಲದೆ, ಗುಡಿಸನಲ್ಲಿದ್ದ ಇಟ್ಟಿದ್ದ 40,000 ರೂ. ನಗದು, ಚಿನ್ನದ ಆಭರಣೆಗಳು ಹಾಗೂ ಆಹಾರ ಧಾನ್ಯಗಳು ಸುಟ್ಟು ಹೋಗಿವೆ. ಗುಡಿಸಲಿನ ಪಟ್ಟದಲ್ಲಿ ಕಟ್ಟಿದ್ದ ಕುರಿಗಳು ಜೀವಂತವಾಗಿ ಸುಟ್ಟುಹೋಗಿದ್ದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X