‘ಬೆಂಗಳೂರು ನಮ್ಮನ್ನು ಕೊಲ್ಲುತ್ತಿದೆ’; ನಗರ ತೊರೆದ ದಂಪತಿಗಳ ವಿಡಿಯೋ ವೈರಲ್

Date:

Advertisements

ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ವಾಸಿಸುತ್ತಿದ್ದ ಉದ್ಯಮಿ ದಂಪತಿಗಳ ಕುಟುಂಬವೊಂದು ನಗರವನ್ನು ತೊರೆದಿದೆ. ನಗರದ ಕ್ಷೀಣಿಸುತ್ತಿರುವ ವಾಯು ಗುಣಮಟ್ಟವು ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದಿರುವ ದಂಪತಿಗಳು ಬೆಂಗಳೂರನ್ನು ತೊರೆದಿದ್ದಾರೆ.

ಉದ್ಯಮಿ ಅಸ್ವಿನ್ ಮತ್ತು ಅಪರ್ಣ ದಂಪತಿಗಳು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದಾರೆ. ವಿಡಿಯೋದಲ್ಲಿ; “ಬೆಂಗಳುರಿನ ಕುರಿತು ಈ ರೀತಿ ಮಾತನಾಡುತ್ತಿರುವುದಕ್ಕೆ ನೀವು ನಮ್ಮನ್ನು ದ್ವೇಷಿಸಬಹುದು. ಆದರೆ, ಬೆಂಗಳೂರು ನಮ್ಮನ್ನು ನಿಧಾನವಾಗಿ ಕೊಲ್ಲುತ್ತಿದೆ. ಇದು ಯಾರಿಗೂ ಗೊತ್ತಾಗುತ್ತಿಲ್ಲ. ಬೆಂಗಳೂರಿನ ವಾಯು ಮಾಲಿನ್ಯವು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ” ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕಾರ್ಪೋರೇಟ್ ವ್ಯವಹಾರ ನಡೆಸುತ್ತಿದ್ದ ದಂಪತಿಗಳು, “ಜನರು ಬೆಂಗಳೂರಿನಲ್ಲಿ ಶುದ್ಧ ವಾಯು ಮತ್ತು ಉತ್ತಮ ಹವಾಮಾನವಿದೆ ಎಂದು ಹೇಳುತ್ತಾರೆ. ಆದರೆ, ನಿಜವಾಗಿಯೂ ಇದೆಯೇ” ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ಪೂರಕ ಎಂಬಂತೆ, ಇದೇ ವರ್ಷದ ಫ್ರಬವರಿಯಲ್ಲಿ ನಗರದ ವಾಯು ಗುಣಮಟ್ಟ ಸೂಚ್ಯಂಕವು (AQI) 297 ಆಗಿದೆ. ಇದು ತುಂಬಾ ತುಂಬಾ ಅನಾರೋಗ್ಯಕರ ಮತ್ತು ಅಪಾಯಕಾರಿ ವಲಯವಾಗುತ್ತದೆ ಎಂದು ಸೂಚ್ಯಂಕ ಹೇಳುತ್ತದೆ.

Advertisements

“ನಗರದ ವಾಯು ಮಾಲಿನ್ಯದ ಬಗ್ಗೆ ನಮಗೆ ಮೊದಲೇ ತಿಳಿದಿದ್ದರೆ, ಬೆಂಗಳೂರನ್ನು ಇನ್ನೂ ಬೇಗನೆ ತೊರೆಯುತ್ತಿದ್ದೆವು. ನಾವು ಈ ನಗರದ ವಾತಾವರಣ, ಜನರು, ಆಹಾರವನ್ನು ಪ್ರೀತಿಸುತ್ತೇವೆ. ಆದರೆ, ನಾವು ಪ್ರತಿದಿನ ಯಾವ ಗಾಳಿಯನ್ನು ಉಸಿರಾಡುತ್ತಿದ್ದೇವೆ ಎಂಬುದು ತಿಳಿದಿರಲಿಲ್ಲ” ಎಂದು ದಂಪತಿಗಳು ಹೇಳುತ್ತಾರೆ.

“ನಮ್ಮ ಬೆಂಗಳೂರು ಅದ್ಭುತವಾಗಿದೆ. ವ್ಯಾಪಾರಕ್ಕೂ ಉತ್ತಮ ಸ್ಥಳ. ಆದರೆ, ನಗರ ನಮ್ಮನ್ನು ಮುಳುಗಿಸುವ ಮೊದಲೇ ನಾವು ಈ ಆಯ್ಕೆಯನ್ನು ಮಾಡಬೇಕಾಯಿತು. ಆದ್ದರಿಂದ ನಾವು ಬೆಂಗಳೂರನ್ನು ತೊರೆಯುತ್ತಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

ಅವರ ವಿಡಿಯೋಗೆ ಸಕಾರಾತ್ಮಕ, ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ. “ಸತ್ಯವನ್ನು ಹೇಳಿದ್ದಕ್ಕೆ ಧನ್ಯವಾದಗಳು… ನಿಮ್ಮಂತೆಯೇ ನಾವೂ ತೀವ್ರ ತಲೆ ನೋವಿನ ಸಮಸ್ಯೆಗೆ ಒಳಗಾಗಿದ್ದೆವು. ಆ ಬಳಿಕ, ನಗರವನ್ನು ತೊರೆದೆವು. ಈಗ…ನಿಜಕ್ಕೂ ಖುಷಿಯಾಗಿ, ಆರೋಗ್ಯವಾಗಿದ್ದೇನೆ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

ಮತ್ತೊಬ್ಬರು ದಂಪತಿಗಳನ್ನು ದೂಷಿಸಿದ್ದಾರೆ, “ನಿಜವಾಗಿಯೂ ಬೆಂಗಳೂರಿನ ಜನರು ನಿಮ್ಮ ನಿರ್ಧಾರದಿಂದ ತುಂಬಾ ಖುಷಿಯಾಗಿದ್ದಾರೆ. ದಯವಿಟ್ಟು ಇನ್ನಷ್ಟು ಜನರನ್ನು ಕರೆದುಕೊಂಡು ಹೋಗಿ” ಎಂದಿದ್ದಾರೆ.

“ಜನರು ನಿಮ್ಮನ್ನು ದ್ವೇಷಿಸುತ್ತಿದ್ದಾರೆ. ಆದರೆ ನೀವು ಹೇಳುತ್ತಿರುವುದು 100% ಸರಿಯಾಗಿದೆ” ಎಂದು ಇನ್ನೊfಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X