ಬೆಂಗಳೂರು | ಹೆಣ್ಣು ಮಕ್ಕಳಿಗೆ ಅಶ್ಲೀಲ ನಿಂದನೆ: ಪ್ರಶ್ನಿಸಿದ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್‌ ಕಾನ್‌ಸ್ಟೆಬಲ್

Date:

Advertisements

ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್‌ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ. ಠಾಣೆಯ ಮಹಿಳಾ ಕಾನ್‌ಸ್ಟೆಬಲ್ ರೇಣುಕಾ ಅವರ ಮೇಲೆ ಅದೇ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಬಿ.ಜಿ ಗೋವಿಂದರಾಜು ಎಂಬಾತ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇಬ್ಬರು ಹೆಣ್ಣು ಮಕ್ಕಳು ಮನೆ ತೊರೆದು ಬಂದಿದ್ದರು. ಅವರಿಗೆ ಅಗತ್ಯ ನೆರವು ಮತ್ತು ಊಟದ ವ್ಯವಸ್ಥೆ ಮಾಡುವಂತೆ ಠಾಣೆಯ ಎಎಸ್‌ಐ ತಿಮ್ಮೇಗೌಡ ಅವರು ರೇಣುಕಾ ಅವರಿಗೆ ಸೂಚಿಸಿದ್ದರು. ಆ ಮಕ್ಕಳಿಗೆ ಊಟ ಕೊಡುವ ವೇಳೆ, ಅವರನ್ನು ಹೆಡ್‌ ಕಾನ್‌ಸ್ಟೆಬಲ್ ಗೋವಿಂದರಾಜು ಅವಾಚ್ಯವಾಗಿ ನಿಂದಿಸಿದ್ದಾರೆ. ಗೋವಿಂದರಾಜು ವರ್ತನೆಯಿಂದ ಆತಂಕಗೊಂಡ ಹೆಣ್ಣು ಮಕ್ಕಳು ಆ ಬಗ್ಗೆ ರೇಣುಕಾ ಅವರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisements

ಮಕ್ಕಳಿಗೆ ನಿಂದಿಸಿದ ಕುರಿತು ಗೋವಿಂದರಾಜು ಅವರನ್ನು ರೇಣುಕಾ ಅವರು ಪ್ರಶ್ನಿಸಿದ್ದಾರೆ. ಆ ಕಾರಣಕ್ಕೆ, ರೇಣುಕಾ ಅವರ ಮೇಲೆ ಗೋವಿಂದರಾಜು ಹಲ್ಲೆ ನಡೆಸಿದ್ದಾರೆ. ಬೂಟು ಕಾಲಿನಿಂದ ಒದ್ದು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ರೇಣುಕಾ ಅವರು ತಮ್ಮದೇ ಠಾಣೆಯಲ್ಲಿ ಗೋವಿಂದರಾಜು ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿ ಗೋವಿಂದರಾಜು ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ,...

ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ...

ಬೆಂಗಳೂರು | ಸಿಲಿಂಡರ್ ಸ್ಫೋಟ ದುರಂತ: ಘಟನಾ ಸ್ಥಳಕ್ಕೆ ಸಚಿವ ಝಮೀರ್ ಭೇಟಿ; ಪರಿಹಾರ ಧನ ವಿತರಣೆ

ಸಚಿವ ಝಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

Download Eedina App Android / iOS

X