ಬೆಂಗಳೂರು | ವ್ಹೀಲಿಂಗ್ ಹಾವಳಿ – ರಾತ್ರಿ ವೇಳೆ ‘ಫ್ಲೈ ಓವರ್‌’ಗಳು ಬಂದ್‌; ಜನರಿಗೆ ಶಿಕ್ಷೆ?

Date:

Advertisements

ಬೆಂಗಳೂರಿನಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಜನರಿಗೆ ಸಂಚಾರ ಅಡಚಣೆಯ ತಲೆನೋವಾಗಿದ್ದರೆ, ಪೊಲೀಸರಿಗೆ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವುದು ಸವಾಲಾಗಿ ಪರಿಣಮಿಸಿದೆ. ಎಲ್ಲೆಡೆ ಫ್ಲೈಓವರ್‌ಗಳಲ್ಲಿ ವ್ಹೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ವ್ಹೀಲಿಂಗ್‌ ಹಾವಳಿಯನ್ನು ತಡೆಯಲು ರಾತ್ರಿ ವೇಳೆ ‘ಮೇಲುರಸ್ತೆ’ಗಳಲ್ಲಿ (ಪ್ಲೈಓವರ್‌) ವಾಹನ ಸಂಚಾರವನ್ನು ನಿರ್ಬಂಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ವ್ಹೀಲಿಂಗ್‌ ಹಾವಳಿಯನ್ನು ತಡೆಯುವ ಉದ್ದೇಶದಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಗರದ ಎಲ್ಲ ಮೇಲುರಸ್ತೆಗಳನ್ನೂ ನಿರ್ಬಂಧಿಸಲಾಗುತ್ತದೆ. ಫ್ಲೈಓವರ್‌ಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ, ವಾಹನ ಸಂಚಾರವನ್ನು ನಿರ್ಬಂಧಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಪೊಲೀಸರು ಇನ್ನೂ ಅಧಿಕೃತ ಆದೇಶ ಅಥವಾ ನಿರ್ಧಾರದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

Advertisements

ಆದಾಗ್ಯೂ, ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧಿಸುವುದು ರಾತ್ರಿ ವೇಳೆ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಸವಾರರಿಗೆ ಅಡಚಣೆಯಾಗಲಿದ್ದು, ಮೇಲುರಸ್ತೆಗಳನ್ನು ಬಿಟ್ಟು, ಅನಗತ್ಯವಾಗಿ ಸಿಗ್ನಲ್‌ಗಳಲ್ಲಿ ನಿಂತು-ದಾಟುವ ಶಿಕ್ಷೆಯಂತಾಗಲಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಅಲ್ಲದೆ, “ರಾತ್ರಿ ವೇಳೆ ಮಾತ್ರವೇ ಪುಂಡರು ವ್ಹೀಲಿಂಗ್‌ ಮಾಡುತ್ತಾರೆ ಎಂದೇನೂ ಇಲ್ಲ. ಮಧ್ಯಾಹ್ನ, ಸಂಜೆಯ ಸಮಯದಲ್ಲೇ ವ್ಹೀಲಿಂಗ್‌ ಹಾವಳಿ ಹೆಚ್ಚಿರುತ್ತದೆ. ಹೀಗಾಗಿ, ರಾತ್ರಿ 11 ಗಂಟೆ ಬಳಿಕ ಫ್ಲೈಓವರ್‌ಗಳಲ್ಲಿ ನಿರ್ಬಂಧ ಹೇರುವುದರಿಂದ ಪ್ರಯೋಜನವಿಲ್ಲ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ನಾಗೇಶ್‌ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ವ್ಹೀಲಿಂಗ್ ಮಾಡುವ ಪುಂಡರ ಸಂಖ್ಯೆ ಹೆಚ್ಚಾಗಿದೆ. ಕೆಲವು ಪುಂಡರು ಮಾರಕಾಸ್ತ್ರಗಳನ್ನು ಹಿಡುದುಕೊಂಡು ದಾಂಧಲೆ ನಡೆಸುತ್ತಾ, ವ್ಹೀಲಿಂಗ್ ಮಾಡುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ. ಆಕ್ಷೇಪಗಳು ವ್ಯಕ್ತವಾಗಿವೆ. ಹಲವಾರು ನೆಟ್ಟಿಗರು ಬೆಂಗಳೂರು ಸಂಚಾರ ಪೊಲೀಸರನ್ನು ಟ್ಯಾಗ್‌ ಮಾಡಿ, ವ್ಹೀಲಿಂಗ್ ವಿಚಾರವಾಗಿ ದೂರುಗಳನ್ನೂ ದಾಖಲಿಸಿದ್ದಾರೆ. ಈ ಹೀಗಾಗಿ, ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧಿಸುವ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

“ನಿಯಮ ಉಲ್ಲಂಘನೆಗಳ ಕುರಿತು ಸಾರ್ವಜನಿಕರು ಈ ಹಿಂದೆ ‘ಪಬ್ಲಿಕ್ ಐ’ (PublicEye) ಆ್ಯಪ್ ಬಳಸುತ್ತಿದ್ದರು. ಆದರೆ, ಈಗ ಅದನ್ನು ಬೆಂಗಳೂರು ಪೊಲೀಸರು ಮೇಲ್ವಿಚಾರಣೆ ಮಾಡಲಾಗುತ್ತಿಲ್ಲ. ಹೀಗಾಗಿ, ಹೊಸದಾಗಿ ಅಭಿವೃದ್ಧಿಪಡಿಸಲಾದ BTP-ASTraM ಆ್ಯಪ್ಅನ್ನು ತರಲಾಗಿದೆ. ಸಾರ್ವಜನಿಕರು ಆ ಆ್ಯಪ್ ಬಳಸಿ, ದೂರುಗಳನ್ನು ದಾಖಲಿಸಬಹುದು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X