ಬೆಂಗಳೂರು | ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ ಯುವಕ; ಹಲವರ ಮೇಲೂ ಹಲ್ಲೆ

Date:

Advertisements

ವಿಕೃತ ಮನಸ್ಸಿನ ಯುವಕನೊಬ್ಬ ಮಹಿಳೆಗೆ ತನ್ನ ಖಾಸಗಿ ಅಂಗ ತೋರಿಸಿ, ವಿಕೃತವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತನ ವಿಕೃತಿಯನ್ನು ಪ್ರಶ್ನಿಸಿದವರ ಮೇಲೂ ಹಲ್ಲೆ ಎಸಗಿದ್ದಾನೆ ಎಂದು ವರದಿಯಾಗಿದೆ.

ವಿಕೃತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಏಪ್ರಿಲ್ 13ರಂದು ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಸತಿ ಸಮುಚ್ಛಯದಲ್ಲಿ ವಾಸವಾಗಿದ್ದ ಆರೋಪಿ ತನ್ನ ನೆರೆಹೊರೆಯ ಮಹಿಳೆಯ ಎದುರು ವಿಕೃತವಾಗಿ ವರ್ತಿಸಿದ್ದಾನೆ. ಮಹಿಳೆ ತನ್ನ ಮನೆಯ ಬಳಿ ಇದ್ದಾಗ, ಎದುರು ಬಂದ ಆರೋಪಿ ತನ್ನ ಖಾಸಗಿ ಅಂಗ ತೋರಿಸಿ, ವಿಚಿತ್ರವಾಗಿ ಸನ್ಹೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

Advertisements

ಆತನ ವಿಕೃತಿಯನ್ನು ಮಹಿಳೆಯ ಪತಿ ಮತ್ತು ಇತರರು ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಮಹಿಳೆಯ ಪತಿ ಸೇರಿ ಏಳು ಮಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ತನ್ನ ತಾಯಿಯ ಮೇಲೂ ಹಲ್ಲೆಗೈದಿದ್ದಾನೆ. ಬಳಿಕ, ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಹಲ್ಲೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಯು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಶೋಧ ನಡೆಯುತ್ತಿದೆ. ಆರೋಪಿ ಈ ಹಿಂದೆಯೇ ಹಲವು ಮಹಿಳೆಯರೊಂದಿಗೆ ಇದೇ ರೀತಿ ಅನುಚಿತವಾಗಿ ವರ್ತಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X