ಬೆಂಗಳೂರು | ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಏಜೆಂಟ್ ಮೇಲೆ ಗಂಭೀರ ಹಲ್ಲೆ

Date:

Advertisements

ತಾವು ಆರ್ಡರ್ ಮಾಡಿದ್ದ ಊಟವನ್ನು ತರುವಲ್ಲಿ ಜೊಮ್ಯಾಟೊ ಡೆಲಿವರಿ ಏಜೆಂಟ್ ತಡವಾಗಿದ್ದಕ್ಕೆ, ಆತನ ಮೇಲೆ ಇಬ್ಬರು ಪುಂಡ ಯುವಕರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಶೋಭಾ ಥಿಯೇಟರ್‌ ಬಳಿ ಘಟನೆ ನಡೆದಿದೆ. ತಾವು ಆರ್ಡರ್ ಮಾಡಿದ್ದ ಊಟವನ್ನು ತಲುಪಿಸುವಲ್ಲಿ ವಿಳಂಬವಾದ ಕಾರಣ ಡೆಲಿವರಿ ಏಜೆಂಟ್‌ ಮೇಲೆ ಇಬ್ಬರು ಆರೋಪಿಗಳು ತಮ್ಮ ಸುತ್ತಲೂ ಬಿದ್ದಿದ್ದ ವಸ್ತುಗಳನ್ನು ಎತ್ತಿಕೊಂಡು ಥಳಿಸಿದ್ದಾರೆ.

ಘಟನೆಯ ವೀಡಿಯೊ ವೈರಲ್ ಆಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿ ಹತ್ತಿರದಲ್ಲಿದ್ದ ಪ್ಲಾಸ್ಟಿಕ್ ಪಾತ್ರೆಯನ್ನು ಎತ್ತಿಕೊಂಡು ಡೆಲಿವರಿ ಏಜೆಂಟ್ ತಲೆಗೆ ಎರಡು ಬಾರಿ ಹೊಡೆದಿದ್ದಾರೆ. ನಂತರ, ಮತ್ತೊಬ್ಬ ವ್ಯಕ್ತಿ ಕುರ್ಚಿಯಿಂದ ಥಳಿಸಿದ್ದಾರೆ.

ಪೊಲೀಸರು ಶೀಘ್ರದಲ್ಲೇ ಮಧ್ಯಪ್ರವೇಶಿಸಿ ಗಲಾಟೆಯನ್ನು ತಡೆದಿದ್ದಾರೆ. ಡೆಲಿವರಿ ಏಜೆಂಟ್ ಮತ್ತು ಇಬ್ಬರು ಪುರುಷರಿಂದ ಹೇಳಿಕೆಗಳನ್ನು ಪಡೆದ್ದಾರೆ. ಆದಾಗ್ಯೂ, ಡೆಲಿವರಿ ಏಜೆಂಟ್‌ ಅಧಿಕೃತ ದೂರು ದಾಖಲಿಸಿಲ್ಲ.

ಬೆಂಗಳೂರಿನಲ್ಲಿ ಡೆಲವರಿ ಏಜೆಂಟ್‌ಗಳ ಮೇಲೆ ಹಲ್ಲೆ ನಡೆಸುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಿವೆ. ಇದೇ ವರ್ಷದ ಜನವರಿಯಲ್ಲಿ, ರಾತ್ರಿ ವೇಳೆ ಊಟ ಆರ್ಡರ್ ಮಾಡಲು ಪ್ರಯತ್ನಿಸುವಾಗ ಸತತ ಸೇವಾ ವೈಫಲ್ಯಗಳಿಂದ ಸಿಟ್ಟಾಗಿದ್ದ ಮಹಿಳೆ, ಆಹಾರವನ್ನು ತಂದ ಏಜೆಂಟ್‌ ಜೊತೆ ಗಲಾಟೆ ನಡೆಸಿದ್ದರು. ಇನ್ನು, ಫೆಬ್ರವರಿಯಲ್ಲಿ ಆಹಾರದ ಪಾರ್ಸೆಲ್ ಕೊಟ್ಟಿಲ್ಲವೆಂದು ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿಗಳು ಡೆಲಿವರಿ ಏಜೆಂಟ್‌ ಮೇಲೆ ಹಲ್ಲೆ ನಡೆಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X