ಉದ್ಯಮಿಗಳು ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಭಿತ್ತಿಪತ್ರ ಅಂಟಿಸಿ: ತುಷಾರ್ ಗಿರಿನಾಥ್

Date:

Advertisements
  • ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ
  • ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ ಭಿತ್ತಿಪತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದ ದಿನ ಮೇ. 10ರಂದು ತಪ್ಪದೇ ಮತದಾನ ಮಾಡಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ(ಕಾಸಿಯಾ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬೆಂಗಳೂರು ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲ ವಲಯಗಳಲ್ಲಿರುವ ಐಟಿ-ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳ ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.

“ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸುಮಾರು 5.6 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮತದಾನದ ದಿನ ಎಲ್ಲರಿಗೂ ವೇತನ ಸಹಿತ ರಜೆ ನೀಡಲಾಗುವುದು. ತಪ್ಪದೇ ಮತದಾನ ಮಾಡಲು ಉದ್ಯೋಗಿಗಳಿಗೆ ತಿಳಿಸಲಾಗುವುದು” ಎಂದು ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ

ದಕ್ಷಿಣ ವಲಯ ಆಯುಕ್ತ ಜಯರಾಮ ರಾಯಪುರ, ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X