ಕ್ರಿಸ್​ಮಸ್ ಹಬ್ಬ | ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ: ಚರ್ಚ್ ಸುತ್ತಮುತ್ತ ಪೊಲೀಸರ ಗಸ್ತು

Date:

Advertisements

ಪಾಶ್ಚಿಮಾತ್ಯ ದೇಶಗಳಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಯೇಸು ಕ್ರಿಸ್ತನ ಜನ್ಮದಿನವನ್ನು ಸ್ಮರಿಸುವ ಸಲುವಾಗಿ ಪ್ರಪಂಚದಾದ್ಯಂತ ಕ್ರಿಶ್ಚಿಯನ್ನರು ಕ್ರಿಸ್‌ಮಸ್‌ ದಿನವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ಕೇವಲ ಕ್ರಿಶ್ಚಿಯನ್ನರು ಮಾತ್ರವಲ್ಲದೇ ಇತರ ಧರ್ಮದವರು ಕೂಡ ವಿಜೃಂಭಣೆಯಿಂದ ಆಚರಿಸುತ್ತಾರೆ. ಸುಂದರವಾದ ಕ್ರಿಸ್‌ಮಸ್ ಟ್ರೀ, ಬಣ್ಣ ಬಣ್ಣದ ಆಲಂಕಾರಿಕ ವಸ್ತುಗಳು, ಉಡುಗೂರೆಗಳು ಎಲ್ಲರ ಕಣ್ಮನ ಸೆಳೆಯುತ್ತವೆ.

ಅದೇ ರೀತಿ ನಮ್ಮ ಬೆಂಗಳೂರಿನಲ್ಲಿಯೂ ಕೂಡ ಕ್ರಿಸ್‌ಮಸ್ ಹಬ್ಬ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಈಗಾಗಲೇ, ನಗರದಲ್ಲಿರುವ ಚರ್ಚ್‌ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ, ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಚರ್ಚ್‌ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್‌ಗಳ ಬಳಿ ಕೆಎಸ್ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಬೆಂಗಳೂರಿನಲ್ಲಿರುವ ಜನಪ್ರಿಯ ಚರ್ಚ್‌ಗಳು

Advertisements

ಸೇಂಟ್‌ ಮೇರಿ ಬೆಸಲಿಕಾ ಅಥವಾ ಸಂತ ಮೇರಿ ಬೆಸಿಲಿಕಾ, ಇನ್ಫೆಂಟ್ ಜೀಸಸ್ ಚರ್ಚ್, ರೋಮನ್ ಕ್ಯಾಥೋಲಿಕ್ ಚರ್ಚ್ ಹಾಗೂ ಹೋಲಿ ಟ್ರಿನಿಟಿ ಚರ್ಚ್ ಬೆಂಗಳೂರಿನಲ್ಲಿರುವ ಜನಪ್ರಿಯ ಚರ್ಚ್‌ಗಳಾಗಿವೆ.

ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಬದಿಯಲ್ಲಿರುವ ಪ್ರಾಚೀನವಾದ ಸೇಂಟ್ ಮೇರಿ ಬೆಸಿಲಿಕಾ ಅಥವಾ ಸಂತ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ಪ್ರತಿ ವರ್ಷ ಕ್ರಿಸ್‌ಮಸ್ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಚರ್ಚ್‌ಗೆ ಸಾಕಷ್ಟು ಮಂದಿ ಭೇಟಿ ನೀಡುತ್ತಾರೆ.

ಹೋಲಿ ಟ್ರಿನಿಟಿ ಚರ್ಚ್‌ ಎಂ.ಜಿ ರಸ್ತೆಯ ಪೂರ್ವ ಭಾಗದಲ್ಲಿರುವ ಟ್ರಿನಿಟಿ ವೃತ್ತದಲ್ಲಿ ಇದೆ. ಇದು ಕೂಡ ಬೆಂಗಳೂರಿನಲ್ಲಿರುವ ಜನಪ್ರಿಯವಾದ ಚರ್ಚ್‌ಗಳಲ್ಲಿ ಒಂದಾಗಿದೆ. ಈ ಚರ್ಚ್ ಅನ್ನು ಇಂಗ್ಲಿಷ್ ನವೋದಯ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ: ಬಿಬಿಎಂಪಿ ಆದೇಶ

ಬೆಂಗಳೂರಿನಲ್ಲಿರುವ ಇನ್ಫೆಂಟ್ ಜೀಸಸ್ ಚರ್ಚ್ ರೋಮನ್ ಕ್ಯಾಥೋಲಿಕ್ ಚರ್ಚ್ ಆಗಿದೆ. ಇದು ಬೆಂಗಳೂರಿನ ವಿವೇಕ್ ನಗರದಲ್ಲಿದ್ದು, ಈ ಸುಂದರವಾದ ಚರ್ಚ್ ಅನ್ನು ಇನ್ಫೆಂಟ್ ಜೀಸಸ್ ಶ್ರೈನ್ ಎಂದೇ ಕರೆಯಲಾಗುತ್ತದೆ.

ಇನ್ನು ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‌ಗೆ ಕ್ರಿಸ್‌ಮಸ್‌ ಹಬ್ಬದ ದಿನ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ, ಚರ್ಚ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X