ಕ್ರಿಸ್‌ಮಸ್ ಸಂಭ್ರಮ | ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ

Date:

Advertisements

ಇಂದು ಕ್ರಿಸ್‌ಮಸ್‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಚರ್ಚ್‌ಗಳಲ್ಲಿ ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್‌ನಲ್ಲಿ ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಮೀನಾಕ್ಷಿ ಕೊಯಿಲ್ ಸ್ಟ್ರೀಟ್, ಸೆಂಟ್ರಲ್ ಸ್ಟ್ರೀಟ್ ಮತ್ತು ನರೋನ್ಹಾ ರಸ್ತೆಯಲ್ಲಿ ರಾತ್ರಿ 8 ಗಂಟೆಯವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇದನ್ನು ಓದಿದ್ದೀರಾ? ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

Advertisements

ಫೀನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನದಲ್ಲಿ ಡಿಸೆಂಬರ್ 28ರಂದು ರಾತ್ರಿ 8 ಗಂಟೆಯವರೆಗೆ ನಿರ್ಬಂಧವಿದೆ. ಐಟಿಪಿಎಲ್ ಮುಖ್ಯರಸ್ತೆ ಬಿ ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್‌ಪಾಳ್ಯ ಡೆಕಾಥ್ಲಾನ್‌ವರೆಗೆ ರಸ್ತೆಯ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಮೆಡಿಕಾರ್ ಆಸ್ಪತ್ರೆಯಿಂದ ಐಟಿಪಿಎಲ್ ಮುಖ್ಯರಸ್ತೆಯಿಂದ ಬಿಗ್ ಬಜಾರ್ ಜಂಕ್ಷನ್‌ವರೆಗೆ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಫೀನಿಕ್ಸ್ ಮಾಲ್‌ಗೆ ಟ್ಯಾಕ್ಸಿ ಮೂಲಕ ಬರುವವರು ಬೆಸ್ಕಾಂ ಕಚೇರಿ ಬಳಿ ಇಳಿಯಬೇಕಾಗುತ್ತದೆ. ಇನ್ನು ಟ್ಯಾಕ್ಸಿ ಚಾಲಕರು ತಮ್ಮ ಗ್ರಾಹಕರನ್ನು ಲೌರಿ ಜಂಕ್ಷನ್‌ನಲ್ಲಿ ಪಿಕ್‌ಅಪ್ ಮಾಡಬಹುದು. ನೆಕ್ಸಸ್ ಶಾಂತಿನಿಕೇತನದ ಡ್ರಾಪ್-ಆಫ್ ರಾಜಪಾಳ್ಯ ಬಳಿ ಮತ್ತು ಪಿಕ್-ಅಪ್ ಆಸ್ಟರ್ ಆಸ್ಪತ್ರೆ ಬಳಿ ಇದೆ.

ಹೂಡಿಯಿಂದ ಫೀನಿಕ್ಸ್ ಮಾಲ್‌ಗೆ ಹೋಗುವ ವಾಹನಗಳು ಕಾಮಧೇನು ನಗರದಲ್ಲಿ ಯು-ಟರ್ನ್ ತೆಗೆದುಕೊಂಡು ಶೆಲ್ ಪೆಟ್ರೋಲ್ ಬಂಕ್‌ನಿಂದ ಎಡಕ್ಕೆ ತಿರುಗಿ ಹಿಂದಿನ ಗೇಟ್ ಮೂಲಕ ಫೀನಿಕ್ಸ್ ಮಾಲ್ ಪ್ರವೇಶಿಸಬೇಕು. ಕೆಆರ್ ಪುರಂ ರೈಲು ನಿಲ್ದಾಣದಿಂದ ಬರುವ ವಾಹನಗಳು ಫೀನಿಕ್ಸ್ ಮಾಲ್‌ಗೆ ಪ್ರವೇಶಿಸಲು ಶೆಲ್ ಪೆಟ್ರೋಲ್ ಬಂಕ್‌ನಿಂದ ಎಡಕ್ಕೆ ತಿರುಗಬೇಕು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X