ಹದಿನೈದು ದಿನಗಳಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ಸುತ್ತುತ್ತೇವೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಅಮಾನತು ಆಗುತ್ತಾರೆ ಗೊತ್ತಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್ ಫೋಗಟ್ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು
ನೀರು ನಿಲ್ಲುವ ಜಾಗಗಳ ಬಗ್ಗೆ ಗಮನ ಕೊಡಿ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ ಎಲ್ಲ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.
ಡಿಸಿಎಂ ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರು ಹಾಜರಿದ್ದರು.
