ನ್ಯಾಯಾಧೀಶರ ಕೋಮುದ್ವೇಷ ಆತಂಕಕಾರಿ; ವೆಲ್ಪೇರ್ ಪಾರ್ಟಿ ಕಳವಳ

Date:

Advertisements

ಮುಸ್ಲಿಮರು ಹೆಚ್ಚಾಗಿ ವಾಸಿಸುತ್ತಿರುವ ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನವೆಂದು ನ್ಯಾಯಾಧೀಶರು ಕರೆದಿರುವುದು ಅಕ್ಷಮ್ಯವಾಗಿದೆ. ನ್ಯಾಯ ನೀಡುವ ಓರ್ವ ನ್ಯಾಯಾಧೀಶರ ಮನೋಸ್ಥಿತಿಯನ್ನು ಇದು ಬಹಿರಂಗಪಡಿಸಿದೆ.ನ್ಯಾಯಾಧೀಶರಲ್ಲಿಯೇ ಕೋಮುದ್ವೇಷ ಇರುವುದು ಆತಂಕಕಾರಿಯಾಗಿದೆ ಎಂದು ‘ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ’ದ ರಾಜ್ಯಾಧ್ಯಕ್ಷ, ವಕೀಲ ತಾಹೇರ್ ಹುಸೇನ್ ಹೇಳಿದ್ದಾರೆ.

ನ್ಯಾಯಾಧೀಶರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಅವರು, “ಇತ್ತೀಚಿನ ದಿನಗಳಲ್ಲಿ ನ್ಯಾಯ ವ್ಯವಸ್ಥೆಯಲ್ಲಿ ಇಂತಹ ಅಘಾತಕಾರಿ, ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಬಹುತ್ವ ಭಾರತದ ಬುನಾದಿಗೆ ಹಾನಿಯಾಗುತ್ತಿದೆ” ಎಂದಿದ್ದಾರೆ.

“ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಮೂವತ್ತು ನಿವೃತ್ತ ನ್ಯಾಯಾಧೀಶರು ಭಾಗವಹಿಸಿರುವುದು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮನೆಗೆ ಪ್ರಧಾನಿ ಭೇಟಿ ನೀಡಿ ಪೂಜೆಯಲ್ಲಿ ಭಾಗಿಯಾಗುವುದು. ಹೈಕೋರ್ಟ್ ನ್ಯಾಯಾಧೀಶರೋರ್ವರು ಮನುಸ್ಮೃತಿಯನ್ನು ಹೊಗಳುವುದು ಹಗೂ ಈಗ ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನವೆಂದು ಕರೆಯುವುದು ಆತಂಕಕಾರಿ ಬೆಳವಣಿಗೆಗಳಾಗಿವೆ. ನ್ಯಾಯಾಧೀಶರೇ ಕೋಮುದ್ವೇಷ ಹರಡುವವರಾದರೆ ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂದು ಹೇಳಿದ್ದಾರೆ.

Advertisements

“ಸುಪ್ರೀಂ ಕೋರ್ಟ್‌ ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದು ಒಳ್ಳೆಯ ಬೆಳವಣಿಗೆ. ನ್ಯಾಯಾಧಿಶರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X