ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಿದ್ದು ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿತಗೊಂಡಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷದಡಿಯಲ್ಲಿ ಇನ್ನೂ ಎಂಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮೃತರ ಪೈಕಿ ಕೆಲವರು ಫುಟ್ಪಾತ್ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತರಲ್ಲಿ ಪಾದಚಾರಿಗಳೂ ಇರಬಹುದು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆ: ಮೂರು ಗಂಟೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಇನ್ನು ಗೋಡೆ ಕುಸಿಯುತ್ತಿದ್ದಂತೆ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ. 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ್ದಾರೆ. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರದಿಂದ ಬೆಂಗಳೂರಿಗೆ ಹೊರಟಿದ್ದಾರೆ. ನಂತರ ಅವರು ನೇರವಾಗಿ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.




