ಸಚಿವ ರಾಮಲಿಂಗಾರೆಡ್ಡಿ ಹೆಸರಿನ ನಕಲಿ ಇಮೇಲ್ ಸೃಷ್ಟಿ: ಬಿಎಂಟಿಸಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಮೇಲ್ಐಡಿ ಸೃಷ್ಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಬಳಿ ₹9.70 ಲಕ್ಷ ಹಣ ಪಾವತಿಸುವಂತೆ ಸೈಬರ್‌ ವಂಚಕರು ಸಂದೇಶ ಕಳುಹಿಸಿದ್ದರು. ಸದ್ಯ ಈ ಬಗ್ಗೆ ಕೇಂದ್ರ ವಿಭಾಗ ಸೈಬರ್ಕ್ರೈಂ ಪೊಲೀಸ್ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಬಿಎಂಟಿಸಿ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರ ಅಬ್ದುಲ್ಖುದ್ದೂಸ್ಅವರು ನೀಡಿದ ದೂರಿನನ್ವಯ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಐಟಿ ಕಾಯ್ದೆಯಡಿ ಎಫ್ಐಆರ್ದಾಖಲಾಗಿದೆ. ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

.13ರಂದು ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಅಧಿಕೃತ ಮೇಲ್ವಿಳಾಸ[email protected]ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ಮೇಲ್ಬಂದಿದೆ.

RAMALINGAREDDY,[email protected] ಎಂಬ ನಕಲಿ ಮೇಲ್ ಬಳಸಿ ಕೂಡಲೇ ಆರ್ಟಿಜಿಎಸ್ ಮೂಲಕ ₹9.70 ಲಕ್ಷ ಪಾವತಿ ಮಾಡುವಂತೆ ಸಂದೇಶ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

ಬಗ್ಗೆ ಅನುಮಾನಗೊಂಡ ಅಬ್ದುಲ್ ಖುದ್ದೂಸ್ಅವರು ನೇರವಾಗಿ ಸಚಿವರಿಗೆ ಕರೆ ಮಾಡಿ ವಿಚಾರಿಸಿದಾಗ, ರೀತಿಯ ಯಾವುದೇ ಮೇಲ್ಸಂದೇಶ ಕಳುಹಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಬಳಿಕ ಇದು ಸೈಬರ್ವಂಚಕರ ಕೈಚಳಕ ಇರಬಹುದು ಎಂದು ಭಾವಿಸಿ, ಅಬ್ದುಲ್ ಅವರು ಸೈಬರ್ಕ್ರೈಂ ಪೊಲೀಸ್ಠಾಣೆಗೆ ದೂರು ನೀಡಿದ್ದಾರೆ.

ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...