ಸೈಬರ್ ವಂಚನೆ | ₹15 ಸಾವಿರಕ್ಕೆ ಹಳೇ ಬೆಡ್ ಮಾರಲು ಹೋಗಿ ₹68 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್‌ ಉದ್ಯೋಗಿ

Date:

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ. ಇದೀಗ, ಓಎಲ್‌ಎಕ್ಸ್‌ನಲ್ಲಿ ₹15 ಸಾವಿರಕ್ಕೆ ತಮ್ಮ ಹಳೆಯ ಬೆಡ್ ಮಾರಾಟ ಮಾಡಲು ಹೋಗಿ ವ್ಯಕ್ತಿಯೊಬ್ಬರು ಬರೋಬ್ಬರಿ ₹68 ಲಕ್ಷ ಕಳೆದುಕೊಂಡ ಪ್ರಕರಣ ವರದಿಯಾಗಿದೆ.

- Advertisement -

ಸಂತೋಷ್ (ಹೆಸರು ಬದಲಾಯಿಸಲಾಗಿದೆ) ಹಣ ಕಳೆದುಕೊಂಡವರು. ಇವರು ಬೆಂಗಳೂರಿನ ಖಾಸಗಿ ಸಾಫ್ಟ್‌ವೇರ್‌ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನೆಲೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಇವರು ತಮ್ಮ ಹಳೆಯ ಬೆಡ್‌ ಮಾರಾಟ ಮಾಡಲು ಮುಂದಾಗಿದ್ದರು. ಈ ಹಿನ್ನೆಲೆ, ಕೆಲವು ಫೋಟೋಗಳ ಸಮೇತ ₹15 ಸಾವಿರಕ್ಕೆ ಓಎಲ್‌ಎಕ್ಸ್‌ನಲ್ಲಿ ಮಾರಾಟಕ್ಕೆ ಇಟ್ಟಿದ್ದರು.

ಇದನ್ನು ಕಂಡ ರೋಹಿತ್ ಮಿಶ್ರಾ ಎಂಬ ವ್ಯಕ್ತಿ ಡಿಸೆಂಬರ್ 6ರಂದು ಸಾಯಂಕಾಲ 7 ಗಂಟೆ ಸುಮಾರಿಗೆ ಸಂತೋಷ್ ಅವರಿಗೆ ಕರೆ ಮಾಡಿ ಬೆಡ್‌ ತೆಗೆದುಕೊಳ್ಳುವ ಬಗ್ಗೆ ವಿಚಾರಿಸುತ್ತಾನೆ ಹಾಗೂ ಇಂದಿರಾನಗರದಲ್ಲಿ ತನ್ನದು ಫರ್ನಿಚರ್ ಮಳಿಗೆ ಎಂದು ಹೇಳಿಕೊಂಡಿದ್ದಾನೆ.

ಬೆಡ್‌ ಖರೀದಿಸುತ್ತೇನೆ ಎಂದು ಹೇಳಿದ ಈತ ಡಿಜಿಟಲ್‌ ಮೂಲಕ ಹಣ ಪಾವತಿ ಮಾಡುತ್ತೇನೆ ಎಂದು ಹೇಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಕರೆ ಮಾಡಿ ನಿಮಗೆ ಹಣ ಪಾವತಿಯಾಗುತ್ತಿಲ್ಲ. ಹಾಗಾಗಿ, ನಿಮ್ಮ ಖಾತೆಯಿಂದ ₹5 ಕಳಿಸಿ, ಅದಕ್ಕೆ ನಾನು ಹಣ ಹಾಕುತ್ತೇನೆ ಎಂದು ಹೇಳಿದ್ದಾನೆ.

ಇದನ್ನು ನಂಬಿದ ಸಂತೋಷ್ ಆತನಿಗೆ ₹5 ಕಳಿಸಿದ್ದಾನೆ. ಆ ಕಡೆಯಿಂದ ಆತ ಪ್ರತಿಯಾಗಿ ₹10 ಕಳಿಸಿದ್ದಾನೆ. ಮತ್ತೆ ಹಣ ಕಳಿಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ ಆತ ₹5000 ಕಳಿಸುವಂತೆ ಕೇಳಿದ್ದಾನೆ. ಅದರಂತೆ ಹಣ ಕಳಿಸಿದ ಸಂತೋಷ್‌ನಿಗೆ ಆತ ಪ್ರತಿಯಾಗಿ ₹10,000 ಕಳಿಸಿದ್ದಾನೆ. ಬಳಿಕ ₹7500 ಕಳಿಸಿದರೆ ₹15,000 ಕಳಿಸುವುದಾಗಿ ಹೇಳಿದ್ದಾನೆ. ಅದರಂತೆ ಸಂತೋಷ್ ₹7,500 ಕಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

ಈ ವೇಳೆ ತಪ್ಪಿ ಸಂತೋಷ್ ₹30,000 ಸಾವಿರ ಕಳುಹಿಸಿದ್ದಾರೆ. ಈ ಬಗ್ಗೆ ಮಿಶ್ರಾಗೆ ತಿಳಿಸುತ್ತಾರೆ. ಇದಕ್ಕೆ ಮಿಶ್ರಾ ತಾನು ಕಳಿಸುವ ಲಿಂಕ್ ಕ್ಲಿಕ್ ಮಾಡಿ ತನಗೆ ಒಟಿಪಿ ಕಳಿಸಿ ಎಂದು ಸಂತೋಷ್‌ಗೆ ಹೇಳಿದ್ದಾನೆ.

ಅದನ್ನು ನಂಬಿದ ಸಂತೋಷ್ ಆತ ಹೇಳಿದಂತೆ ನಡೆದುಕೊಂಡಿದ್ದಾನೆ. ಇದಾದ ಬಳಿಕ ತಾಂತ್ರಿಕ ದೋಷ ಎಂಬ ನೆಪ ಹೇಳಿ ಮಿಶ್ರಾ ಲಿಂಕ್‌ ಕಳಿಸಿ ಒಟಿಪಿ ಕೇಳಿದ್ದಾನೆ. ಇದರಿಂದ ಸಂತೋಷ್ ಹಂತಹಂತವಾಗಿ ತನ್ನ ಖಾತೆಯಿಂದ ಹಣ ಕಳೆದುಕೊಂಡಿದ್ದಾರೆ.

ಮೊದಮೊದಲು ಸಾವಿರ ಲೆಕ್ಕದಲ್ಲಿ ಲಪಟಾಯಿಸುತ್ತಿದ್ದ ಹಣ, ಬಳಿಕ ಲಕ್ಷಾಂತರ ಹಣವನ್ನು ಆತ ಪೀಕಲು ಆರಂಭಿಸಿದ್ದನು. ಬಳಿಕ ಸಂತೋಷ್‌ಗೆ ತಾನು ಮೋಸ ಹೋಗಿರುವುದು ತಿಳಿದುಬಂದಿದೆ. ಅಂತಿಮವಾಗಿ ಸಂತೋಷ್‌ ₹68 ಲಕ್ಷ ಕಳೆದುಕೊಂಡಿದ್ದಾರೆ.

ಐಎಂಪಿಎಸ್ ಟ್ಪಾನ್ಸ್ ಫರ್ ಮೂಲಕ ಸೈಬರ್ ಕಳ್ಳ ಹಣ ಲಪಟಾಯಿಸುತ್ತಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...