ಬಿಪರ್‌ಜಾಯ್ ಚಂಡಮಾರುತ | ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Date:

  • ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ
  • ಕಡಲ ತೀರದಲ್ಲಿ 2.3 ರಿಂದ 3.2 ಮೀ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜೂ.11 ಮತ್ತು 12ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಹಾಗೂ ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯ ಸೂಚನೆ ಇದ್ದು ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯ ಅಬ್ಬರ ಇರಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಸಂಜೆ ಅಥವಾ ರಾತ್ರಿ ವೇಳೆ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರಿನಿಂದ ಕಾರವಾರದವರೆಗೆ ಕಡಲ ತೀರದಲ್ಲಿ 2.3 ರಿಂದ 3.2 ಮೀ. ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಜೂ.11 ರವರೆಗೆ ಸಾರ್ವಜನಿಕರು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್ ಚಂಡಮಾರುತದ ಪರಿಣಾಮವಾಗಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿದ್ದು, ಜೂನ್‌ 9 ರಂದು ಮುಂಗಾರು ಕೇರಳ ಪ್ರವೇಶ ಮಾಡುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪರ್‌ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಪಾಕಿಸ್ತಾನದ ಕಡೆಗೆ ಸಾಗುತ್ತಿದೆ. ಇನ್ನೆರಡು ದಿನಗಳು ಗುಜರಾತ್‌ ಹಾಗೂ ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಚಂಡಮಾರುತದ ಪರಿಣಾಮವಾಗಿ ಮಳೆ ಬೀಳಬಹುದು. ಕರ್ನಾಟಕ ಕರಾವಳಿಗೂ ಕೂಡ ಮಳೆ ಆಗಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಬಿಪರ್‌ಜಾಯ್‌ ಚಂಡಮಾರುತದ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್ ಡಿ, “ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ. ಕನ್ನಡದಲ್ಲಿ ಇದಕ್ಕೆ ದುರಂತ, ವಿಪತ್ತು, ಹಾನಿ ಎಂಬ ಅರ್ಥ ಬರುತ್ತದೆ. ಪ್ರಸ್ತುತ ಈ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಇದೆ. ಇದರ ಪ್ರಭಾವ ಕರ್ನಾಟಕಕ್ಕೆ ಮೇಲೆ ಬೀರುವುದಿಲ್ಲ. ಉತ್ತರ ದಿಕ್ಕಿನಿಂದ, ವಾಯವ್ಯ ದಿಕ್ಕಿನೆಡೆಗೆ ಹಾದು ಕರಾಚಿ ಅಥವಾ ಗಲ್ಫ್ ದೇಶಗಳಿಗೆ ತಲುಪುತ್ತದೆ. ಉತ್ತರ ದಿಕ್ಕಿಗೆ ಬರುವ ಹಿನ್ನೆಲೆ, ಕರಾವಳಿಯ ಭಾಗದಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ” ಎಂದರು.

“ಈ ತಿಂಗಳು ಈ ಚಂಡಮಾರುತದ ತೀವ್ರತೆ ಹೆಚ್ಚಾಗಿರುತ್ತದೆ. ಬಿರುಗಾಳಿ ಇವತ್ತು ಮತ್ತು ನಾಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಹೆಚ್ಚಾಗಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

“ಬೆಂಗಳೂರಿಗೆ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಇನ್ನೂ ಕೇರಳ ಪ್ರವೇಶಿಸಿಲ್ಲ. ಇವತ್ತು ಮತ್ತು ನಾಳೆ ಮುಂಗಾರು ಪ್ರವೇಶಿಸಬಹುದು. ಬಳಿಕ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಮುಂಗಾರು ಮಳೆ ಬೆಳಗ್ಗೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ದ್ವೇಷ ಭಾಷಣ: ಕ್ರಮಕ್ಕೆ ಆಗ್ರಹಿಸಿ ನಾಗರಿಕ ಸಂಸ್ಥೆಗಳಿಂದ ಚುನಾವಣಾ ಆಯೋಗಕ್ಕೆ ದೂರು

ಕಳೆದ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...