ಡೇಟಿಂಗ್ ಹಗರಣ | ₹1.05 ಕೋಟಿ ಕಳೆದುಕೊಂಡ ವ್ಯಕ್ತಿ

Date:

ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಕೂಡ ಹಗರಣವಾಗಿ ಮಾರ್ಪಟ್ಟಿದೆ. ಡೇಟಿಂಗ್ ಹೆಸರಿನಲ್ಲಿ ವಂಚಿಸಲ್ಪಡುವ ಮತ್ತು ವಂಚನೆಗೆ ಒಳಗಾಗುವ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದರಲ್ಲಿ, ಬೆಂಗಳೂರಿನ ವಿಚ್ಛೇದಿತ ವ್ಯಕ್ತಿಯೊಬ್ಬರು ₹1.05 ಕೋಟಿ ಕಳೆದುಕೊಂಡಿದ್ದಾರೆ.

- Advertisement -

ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಓರ್ವ ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಆಕೆ, ತಾನೂ ವಿಚ್ಛೇದಿತೆ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾಳೆ. ವ್ಯಾಪಾರದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಬರೋಬ್ಬರಿ ಕೋಟಿ ರೂಪಾಯಿ ವಂಚಿಸಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಾಮಾಜಿಕ ಮಾಧ್ಯಮದಲ್ಲಿ ಪ್ರಕೃತಿ ಶ್ರೀಧರನ್ ಎಂಬ ಹೆಸರಿನಿಂದ ಗುರುತಿಸಿಕೊಂಡಿರುವ ಮಹಿಳೆ ಮೂಲತಃ ಕೇರಳದವರು ಎಂದು ಹೇಳಲಾಗಿದೆ. ಆಕೆ, ವಂಚನೆಗೊಳಗಾದ ವ್ಯಕ್ತಿಯೊಂದಿಗೆ ಸುಮಾರು ಮೂರ್ನಾಲ್ಕು ತಿಂಗಳು ಚಾಟಿಂಗ್ ನಡೆಸಿದ್ದಾಳೆ.

ಆತನ ವಿಶ್ವಾಸ ಗಳಿಸಿದ ಬಳಿಕ, “ಆನ್‌ಲೈನ್ ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ಇದರಿಂದ ಉತ್ತಮ ಆದಾಯ ಬರುತ್ತಿದೆ. ನಾನು ₹12 ಕೋಟಿ ಗಳಿಸಿದ್ದೇನೆ. ನೀವು ಹೆಚ್ಚು ಆದಾಯ ಗಳಿಸಬಹುದು” ಎಂದು ಆಮಿಷವೊಡ್ಡಿದ್ದಾಳೆ.

ಆಕೆಯ ಮಾತನ್ನು ನಂಬಿದ ಸಂತ್ರಸ್ತ ಕಾಲಕ್ರಮೇಣ ಒಟ್ಟು ₹1.05 ಕೋಟಿ ವ್ಯಯಿಸಿದ್ದಾನೆ. ಬಳಿಕ, ತನ್ನ ಹೂಡಿಕೆ ಹಣವನ್ನು ವಾಪಸ್ ಪಡೆಯಲು ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾನೆ. ಆದರೆ, ಆತನ ವೈಯಕ್ತಿಕ ಮಾಹಿತಿ ಹಾಗೂ ಬ್ಯಾಂಕ್ ಮಾಹಿತಿಗಳನ್ನೆಲ್ಲ ಪಡೆದುಕೊಂಡಿದ್ದ ಮಹಿಳೆ ಆತನಿಗೆ ಬೆದರಿಕೆ ಹಾಕಿದ್ದಾಳೆ. ಅಲ್ಲದೆ, ಆತನ ಬ್ಯಾಂಕ್ ಖಾತೆಯಿಂದ ಲಾಗ್ ಔಟ್ ಮಾಡಿದ್ದಾಳೆ ಎಂದು ಬೆಂಗಳೂರು ಆಗ್ನೇಯ ಪೊಲೀಸ್ ಉಪ ಆಯುಕ್ತ ಸಿ.ಕೆ ಬಾಬಾ ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಸೈಬರ್ ಕ್ರೈಮ್ ಪೊಲೀಸರು ಆತನ ಬ್ಯಾಂಕ್ ಖಾತೆಯನ್ನು ನಿರ್ಬಂಧಿಸಿದ್ದಾರೆ. ಆತ ಕಳೆದುಕೊಂಡ ಮೊತ್ತವನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ಡೇಟಿಂಗ್/ಮ್ಯಾಟ್ರಿಮೋನಿಯಲ್ ಪ್ಲಾಟ್ಫಾರ್ಮ್‌ಗಳನ್ನು ಬಳಸುವವರಿಗೆ ಪೊಲೀಸ್ ಸಲಹೆ

  • ವೈಯಕ್ತಿಕ ಮತ್ತು ಹಣಕಾಸಿನ ಮಾಹಿತಿ, ವಿಳಾಸ ಅಥವಾ ದಾಖಲೆಗಳನ್ನು ಹಂಚಿಕೊಳ್ಳಬೇಡಿ
  • ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಬಾರಿ ಭೇಟಿ ಮಾಡಿ ಮತ್ತು ಆ ಖಾತೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ
  • ವರ್ಚುವಲ್ ಪ್ಲಾಟ್ಫಾರ್ಮ್‌ಗಳ ಮೂಲಕ ನಿಕಟ ಚಾಟ್‌ಗಳು/ಕರೆಗಳನ್ನು ಮಾಡಬೇಡಿ
  • ಆತುರದ ಹೂಡಿಕೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
  • ವಂಚನೆಯ ಅನುಮಾನವಿದ್ದರೆ 1930 ಅಥವಾ 112 ಅನ್ನು ಸಂಪರ್ಕಿಸಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...