ಡ್ರೋನ್ ಕ್ಯಾಮೆರಾ ಬಳಕೆ: ವಿಶ್ವೇಶ್ವರ ಭಟ್‌ಗೆ ಆರ್‌ಏಫ್‌ಒ ನೋಟಿಸ್

Date:

Advertisements

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮೆರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ(ಆರ್‌ಎಫ್‌ಒ) ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರು ಡ್ರೋನ್ ಕ್ಯಾಮರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದಾರೆ. ಈ ಬಗ್ಗೆ ಕಾರಣ ಕೇಳಿ ಅರಣ್ಯಾಧಿಕಾರಿಗಳು ಭಟ್‌ ಅವರಿಗೆ ಜನವರಿ 10ರಂದು ನೋಟೀಸ್‌ ನೀಡಿದ್ದಾರೆ.

“ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ದೇವಸ್ಥಾನದ ಬಳಿ ಅನುಮತಿ ಇಲ್ಲದೆ ಡೋನ್ ಮೂಲಕ ಚಿತ್ರಿಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಸೆಕ್ಷನ್ 28,1(ಬಿ) ಉಲ್ಲಂಘನೆಯಾಗಿದೆ. ಅಲ್ಲದೆ, ನೀವು ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ನಾನಾ ಚಿತ್ರಗಳನ್ನು ಹಾಗೂ ಪೋಸ್ಟ್ಗಳನ್ನು ಮಾಡಿ ಸಂಜೆ 6 ಗಂಟೆ ಎಂದು ನಮೂದಿಸಿದ್ದೀರಿ ಇದು ವ್ಯಾಪಕ ಚರ್ಚೆಯಾಗುತ್ತಿದ್ದು, ದೇವಾಲಯಕ್ಕೆ ತೆರಳಲು ತಪ್ಪಲಿನಿಂದ ಸಂಜೆ 4 ಗಂಟೆಯ ವರೆಗೆ ಅವಕಾಶವಿದೆ. ಆದ್ದರಿಂದ ಎರಡು ವಿಷಯಗಳ ಸ್ಪಷ್ಟಿಕರಣವನ್ನು ಪತ್ರ ತಲುಪಿದ ಕೂಡಲೇ ತಾವು ಖುದ್ದಾಗಿ ಹಾಜರಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಬಂಡೀಪುರ ಉಪ ವಿಭಾಗ, ಬಂಡೀಪುರ ರವರ ಕಛೇರಿಗೆ ಹಾಜರಾಗಿ ಸದರಿ ಕಾರಣ ಕೇಳಿ ನೋಟಿಸ್ಗೆ ಉತ್ತರಿಸಬೇಕು” ಎಂದು ನೋಟಿಸ್ನಲ್ಲಿ ಆರ್ಎಫ್ ಮಂಜುನಾಥ್ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಸಾವು

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಡ್ರೋನ್ ಕ್ಯಾಮರಾದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ನೀಡುವಂತೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಣ್ಯಾಧಿಕಾರಿ ಸೂಚಿಸಿದ್ದಾರೆ. ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್‌ರಿಗೆ ನೋಟಿಸ್ ಜಾರಿಯಾಗಿದೆ.

WhatsApp Image 2024 01 14 at 2.07.58 PM

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X