ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

Date:

  • ಹಣ ವರ್ಗಾವಣೆ ದಾಖಲೆಗಳ ಮಾಹಿತಿ ನೀಡದ ಶಿಕ್ಷಣ ಸಂಸ್ಥೆ
  • ಫೆಮಾ ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ; ಇ.ಡಿ ಹೇಳಿಕೆ

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬೆಂಗಳೂರಿನ ‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​’ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. 8.26 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದಿದೆ.

‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಒಡಾಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣ ಒದಗಿಸುತ್ತಿದೆ. ಇದು ಚೀನಾ ಮೂಲದ ಲಿಯು ಕ್ಯಾನ್ ಹಾಗೂ ಭಾರತದ ವೇದಾಂತ್ ಹಮಿರ್ವಾಸಿಯಾ ಅವರನ್ನು ತನ್ನ ನಿರ್ದೇಶಕರನ್ನಾಗಿ ಹೊಂದಿದ್ದು, ಭಾರತದಲ್ಲಿ ಬೆಂಗಳೂರಿನಿಂದ ಕಾರ್ಯ ನಿರ್ವಹಿಸುತ್ತಿತ್ತು.

ಈ ಸಂಸ್ಥೆಯನ್ನು ಕ್ಯಾಮನ್ ದ್ವೀಪಗಳಿಂದಲೇ ಶೇಕಡಾ ನೂರರಷ್ಟು ಚೀನಾ ಮೂಲದ ವ್ಯಕ್ತಿಗಳು ನಿರ್ವಹಿಸುತ್ತಿದ್ದಾರೆ. ಜಾಹೀರಾತು ವೆಚ್ಚದ ಹೆಸರಿನಲ್ಲಿ ಕಂಪನಿಯ ಖಾತೆಯಿಂದ ₹82.72 ಕೋಟಿ ಹಣ ಚೀನಾ ಮತ್ತು ಹಾಂಕಾಂಗ್ ಮೂಲದ ಖಾತೆಗಳಿಗೆ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಈ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, “ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ. ಇಡಿ ಅಧಿಕಾರಿಗಳು ಕಳೆದ ಏಪ್ರಿಲ್​ನಲ್ಲಿ ಈ ಸಂಸ್ಥೆ ಮೇಲೆ ದಾಳಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಂಸ್ಥೆಯ ಎಲ್ಲ ವ್ಯವಹಾರಗಳು, ಹಣಕಾಸು ನಿರ್ಧಾರಗಳನ್ನು ಒಳಗೊಂಡಂತೆ ಪ್ರತಿಯೊಂದು ತೀರ್ಮಾನ ಚೀನಾದಲ್ಲಿರುವವರು ನಿರ್ಧರಿಸುತ್ತಿದ್ದಾರೆ. ಚೀನಾದ ನಿರ್ದೇಶಕ ಲಿಯು ಕ್ಯಾನ್ ಸೂಚನೆಯ ಮೇರೆಗೆ ಸಂಸ್ಥೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚದ ಹೆಸರಿನಲ್ಲಿ ₹82.72 ಕೋಟಿ ಎರಡು ರಾಷ್ಟ್ರಗಳಿಗೆ ವರ್ಗಾವಣೆಗೊಂಡಿರುವುದನ್ನು ಪತ್ತೆ ಹಚ್ಚಲಾಗಿತ್ತು” ಎಂದು ಹೇಳಿದೆ.

ಅಲ್ಲದೇ, ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನ್ನ ಕಡೆಯಿಂದ ಯಾವುದೇ ಸೇವಾ ಸ್ವೀಕೃತಿಯ ದಾಖಲೆಗಳು ಮತ್ತು ಹೇಳಿದ ವೆಚ್ಚಗಳಿಗೆ ಯಾವುದೇ ಜಾಹೀರಾತಿನ ಪುರಾವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿತ್ತು. ಜೊತೆಗೆ ಲಿಯು ಕ್ಯಾನ್‌ನ ಸೂಚನೆಯಂತೆ ಹಣ ಪಾವತಿಸಲಾಗಿತ್ತು ಕಂಪನಿಯ ನಿರ್ದೇಶಕ ಮತ್ತು ಖಾತೆ ವ್ಯವಸ್ಥಾಪಕರು ತನಿಖೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದರು. ಗೂಗಲ್ ಮತ್ತು ಫೇಸ್‌ಬುಕ್ ಮೂಲಕ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ ಎಂದು ಚೀನಾದ ನಿರ್ದೇಶಕರು ಹೇಳಿದ್ದರು ಎಂಬುವುದಾಗಿ ಸಂಸ್ಥೆಯ ಭಾರತೀಯ ನಿರ್ದೇಶಕ ವೇದಾಂತ ಹಮಿರ್ವಾಸಿಯಾ ಹೇಳಿಕೆ ನೀಡಿದ್ದರು ಎಂದು ವಿವರಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...