ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

Date:

  • ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ
  • ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು

ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ 6,850 ಬಸ್‌ಗಳ ಪೈಕಿ 1,700 ಬಸ್‌ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಮತ್ತು ಇನ್ನೂ 350 ವಾಹನಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ನಿಯೋಜಿಸಿದ್ದರಿಂದಾಗಿ ನಗರದಲ್ಲಿ ಪ್ರಯಾಣಿಕರ ಸೇವೆಗಳಿಗೆ ತೊಂದರೆ ಉಂಟಾಯಿತು.

- Advertisement -

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕಾಗಿ ನೀಡಿದ್ದು, ಬಿಎಂಟಿಸಿಯಿಂದ ಬಾಡಿಗೆ ಪಡೆದ 350 ಬಸ್‌ಗಳು ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಅಂದರೆ, ಮೈಸೂರು, ಮಂಡ್ಯ, ಮದ್ದೂರು, ತುಮಕೂರು, ಪಾವಗಡ, ಚಿತ್ರದುರ್ಗ, ಹೊಸದುರ್ಗ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬೆಳಗ್ಗೆ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಇತ್ತು. ಹೆಚ್ಚಿನ ಪ್ರಯಾಣಿಕರು ಮತ ಚಲಾಯಿಸಲು ತಮ್ಮ ಊರಿಗಳಿಗೆ ತೆರಳಿದ್ದಾರೆ” ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ, ಬಿಎಂಟಿಸಿ ಬೇಡಿಕೆಗೆ ಅನುಗುಣವಾಗಿ ಬಸ್ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿತ್ತು. ಮೇ 10ರಂದು ಸಾರ್ವಜನಿಕ ರಜೆ ಇದ್ದ ಕಾರಣ ನಗರದಲ್ಲಿ ಬಸ್‌ಗಳಲ್ಲಿ ಹೆಚ್ಚಿನ ಬೇಡಿಕೆ ಇರಲಿಲ್ಲ” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

“ಮೆಜೆಸ್ಟಿಕ್ ಮತ್ತು ಶಿವಾಜಿನಗರ ಬಸ್ ನಿಲ್ದಾಣಗಳು ಹೆಚ್ಚು ಪ್ರಯಾಣಿಕರು ಮತ್ತು ಬಸ್‌ಗಳಿಲ್ಲದೆ ಖಾಲಿಯಾಗಿದ್ದವು. ಮೇ 9 ಮತ್ತು 10 ರಂದು ಬಿಎಂಟಿಸಿ ಬಸ್ ಸೇವೆಗೆ ತೊಂದರೆಯಾಗಿದೆ. ಪ್ರಯಾಣಿಕರು ಬಸ್ ಪಡೆಯಲು 45 ನಿಮಿಷದಿಂದ ಎರಡು ಗಂಟೆಗಳವರೆಗೆ ಕಾಯಬೇಕಾಯಿತು” ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...