ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

Date:

ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್‌ಗಳನ್ನು ನೀಡಲು ಹೇಗೆ ಸಾಧ್ಯ? ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

- Advertisement -

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಈ ವೇಳೆ ಮಾತನಾಡಿದ ಅವರು, “ಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್‌ ಅವರಿಗೆ ಈ ಮೊದಲು ಪ್ರತಾಪ್‌ ಸಿಂಹ ಅವರೇ ಎರಡು ಬಾರಿ ಪಾಸ್‌ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್‌ ಸಭಾಂಗಣ ಪ್ರವೇಶಿಸಲು ಪಾಸ್‌ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್‌ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್‌ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್‌ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ, ಪ್ರತಾಪ್‌ ಸಿಂಹ ಅವರನ್ನು ಉಚ್ಚಾಟಿಸಿ, ವಿಚಾರಣೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

“ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪೌರುಷ ಮೆರೆಯುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಆದರೆ, ಈ ಭದ್ರತಾ ವೈಫಲ್ಯಕ್ಕೆ ಮೂಲ ಸಂಸದ ಪ್ರತಾಪ್‌ ಸಿಂಹ. ಅವರು ಪಾಸ್‌ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಕಾರಣ. ಪ್ರತಾಪ್‌ ಸಿಂಹ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸುವ ಬದಲು ಭದ್ರತಾ ವೈಫಲ್ಯದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ” ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

“ಸಂಸತ್‌ ಭವನ ಪ್ರವೇಶಿಸಲು ಪಾಸ್‌ ಹೊಂದಿರುವ ವ್ಯಕ್ತಿ ಬಿಗಿ ಭದ್ರತಾ ನಿಯಮ ಪಾಲಿಸಬೇಕಾಗುತ್ತದೆ. ನೀರಿನ ಬಾಟಲಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಪರಿಕರ ಹಾಗೂ ಆಯುಧಗಳಂಥ ಯಾವುದೇ ವಸ್ತುಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ. ಪಾರ್ಲಿಮೆಂಟರಿ ಸೆಕ್ಯೂರಿಟಿ ಸರ್ವಿಸ್‌, ದಿಲ್ಲಿ ಪೊಲೀಸ್‌, ನಾನಾ ಏಜೆನ್ಸಿಗಳು, ಮ್ಯಾನುಯಲ್‌ ತಪಾಸಣೆ, ಬಾಡಿ ಸ್ಕ್ಯಾನರ್‌, ಮೆಟಲ್‌ ಡಿಟೆಕ್ಟರ್‌ ಹೀಗೆ ಹಲವು ಹಂತದ ಭದ್ರತಾ ವ್ಯವಸ್ಥೆಯಿರುವ ಸಂಸತ್‌ಗೆ ಗ್ಯಾಸ್‌ ಕ್ಯಾನ್‌ ತಂದಿದ್ದಾರೆ ಎಂದರೆ ಭದ್ರತಾ ವೈಫಲ್ಯವಲ್ಲದೆ ಬೇರೇನೂ ಕಾರಣವಲ್ಲ. ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್‌, ಉತ್ತರ ಪ್ರದೇಶದ ಲಖನೌದ ಸಾಗರ್‌ ಶರ್ಮಾ, ಹರಿಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರು ಗ್ರಾಮದ ಲಲಿತ್‌ ಝಾ ಮಹಾರಾಷ್ಟ್ರದ ಅಮೋಲ್‌ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

“ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರಕ್ಕೆ ಗೊತ್ತಾಗಲಿಲ್ಲವೇ? ಗೃಹ ಸಚಿವ ಅಮಿತ್‌ ಶಾ ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಒಂದೆಡೆ ಚೀನಾದ ಸೇನೆ ಅರುಣಾಚಲ ಪ್ರದೇಶದ ಗಡಿಯನ್ನು ಅತಿಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಭಾರಿ ಏರಿಕೆಯಾಗಿದೆ. ದೇಶಕ್ಕೆ ರಕ್ಷಣೆ ನೀಡಬೇಕಾದ ಗೃಹ ಸಚಿವರು ತಮ್ಮ ಕೆಲಸವನ್ನು ಬಿಟ್ಟು ಚುನಾವಣೆಗಳನ್ನು ಹೇಗೆ ಗೆಲ್ಲುವುದು ಎಂಬ ತಂತ್ರ ಹೆಣೆಯುವುದರಲ್ಲೇ ಕಾಲಕಳೆಯುತ್ತಿದ್ದಾರೆ. ತನ್ನ ಕರ್ತವ್ಯವನ್ನು ನಿಭಾಯಿಸಲು ಆಗದ ಅಮಿತ್‌ ಶಾ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮ ಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮೋಹನ್ , ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರ್ ರಾವ್ ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...