- ಮೇ 10ರಂದು ವಿಧಾನಸಭಾ ಚುನಾವಣೆಯ ಮತದಾನ
- ಮೇ 11 ರಂದು ರಾತ್ರಿ 12.05ಕ್ಕೆ ಹೊರಡಲಿದೆ ಕೊನೆಯ ರೈಲು
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆ, ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.
ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ)ಗಳಿಂದ ಕೊನೆಯ ರೈಲು ಸೇವೆಯು ಮೇ 11 ರಂದು 12.05 ಗಂಟೆಗೆ ಹೊರಡಲಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಕೊನೆಯ ರೈಲು ಸೇವೆಯು ಮೇ 11 ರಂದು 12.35 ಗಂಟೆಗೆ ಎಲ್ಲ ನಾಲ್ಕು ದಿಕ್ಕುಗಳ ಕಡೆಗೆ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆಯೆಡೆಗೆ ಹೊರಡಲಿದೆ. ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ಬಿಎಂಆರ್ಸಿಎಲ್ ಕೋರಿದೆ.
ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ: ತುಷಾರ್ ಗಿರಿನಾಥ್
ಮೇ 8ರ ಸಂಜೆಯಿಂದ ಪಬ್ ಬಾರ್ ಬಂದ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಮೇ 8ರ ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಸಂಜೆ ಐದು ಗಂಟೆ ನಂತರ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶ ಇಲ್ಲ. ಇಂದಿನಿಂದ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ಮದ್ಯದಂಗಡಿಗಳಿಗೆ ಬೀಗ ಹಾಕಬೇಕೆಂದು ಎಲ್ಲ ಬಾರ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಚುನಾವಣಾ ನೀತಿ ಸಂಹಿತೆಯಂತೆ ಮೇ 8ರ ಸಂಜೆ ಐದು ಗಂಟೆಯಿಂದ ಪಬ್, ಬಾರ್ ಹಾಗೂ ಎಂಆರ್ಪಿ ಮಳಿಗೆಗಳು ಬಂದ್ ಇರಲಿವೆ.