ಒಪ್ಪಿಗೆಯಿಲ್ಲದೆ ಖಾಸಗಿ ಚಿತ್ರಗಳ ಹಂಚಿದರೆ ಎಫ್‌ಐಆರ್: ವಿಕೃತ ಪ್ರವೃತ್ತಿ ವಿರುದ್ಧ ಡಿಜಿಪಿ ಸಲೀಂ ಎಚ್ಚರಿಕೆ

Date:

ಪ್ರತೀಕಾರ ತೀರಿಸಿಕೊಳ್ಳಲು ಸಂಗಾತಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಅಥವಾ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ವಿಕೃತ ಪ್ರವೃತ್ತಿ ವಿರುದ್ಧ ರಾಜ್ಯ ಪೊಲೀಸರ ಬಿಗಿ ಕ್ರಮಕೈಗೊಂಡಿದ್ದಾರೆ. ಒಪ್ಪಿಗೆಯಿಲ್ಲದೆ ಖಾಸಗಿ ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವುದು, ಆನ್‌ಲೈನ್ ಬ್ಲ್ಯಾಕ್‌ಮೇಲ್ ಮಾಡುವುವವರ ವಿರುದ್ಧ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕು ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಮ್ ಆದೇಶ ಹೊರಡಿಸಿದ್ದಾರೆ.

- Advertisement -

ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಗೆ ಸಂಬಂಧಿಸಿದ ಆರೋಪಗಳಲ್ಲಿ ದೂರು ದಾಖಲಿಸಲು ವಿಳಂಬ ಮಾಡಿದ್ದಾರೆ ಅಥವಾ ದೂರೇ ದಾಖಲಿಸಿಲ್ಲ ಎಂಬ ಬಗ್ಗೆ ಹಲವು ದೂರುಗಳು ಬಂದಿದ್ದವು. ಈ ಸಂಬಂಧ ಡಿಜಿಪಿ ಸಲೀಂ ಸುತ್ತೋಲೆ ಹೊರಡಿಸಿದ್ದು, ಇಂತಹ ವಿಕೃತ ಪ್ರವೃತ್ತಿ ವಿರುದ್ಧ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರ ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಿದೆ: ಗೃಹ ಸಚಿವ ಡಾ.‌ಜಿ.ಪರಮೇಶ್ವರ್

ಫೋಟೋ, ವಿಡಿಯೋ ತೆಗೆಯಲು ಒಪ್ಪಿಗೆ ನೀಡಲಾಗಿದೆ ಎಂಬ ಕಾರಣ ನೀಡಿ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ಈ ಸಂಬಂಧ ಸುತ್ತೋಲೆಯಲ್ಲಿ ಉಲ್ಲೇಖಿಸಿರುವ ಡಿಜಿಪಿ, “ಫೋಟೋ, ವಿಡಿಯೋ ತೆಗೆಯಲು ಒಪ್ಪಿಗೆ ನೀಡಿದ ಮಾತ್ರಕ್ಕೆ, ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಒಪ್ಪಿಗೆ ನೀಡಿದಂತೆ ಅಲ್ಲ. ಅನುಮತಿ ಇಲ್ಲದೆಯೇ ಖಾಸಗಿ ಚಿತ್ರ, ವಿಡಿಯೋ ಹಂಚಿಕೊಳ್ಳುವುದು ಅಪರಾಧ” ಎಂದು ಸ್ಪಷ್ಟಪಡಿಸಿದ್ದಾರೆ.

ದೂರುದಾರರ ಒಪ್ಪಿಗೆ ಇದೆ ಎಂಬ ಕಾರಣವನ್ನು ಆಧರಿಸಿ ಎಫ್‌ಐಆರ್ ದಾಖಲಿಸುವುದನ್ನು ವಿಳಂಬ ಮಾಡಬಾರದು ಅಥವಾ ಎಫ್‌ಐಆರ್ ದಾಖಲಿಸಲು ನಿರಾಕರಿಸಬಾರದು ಎಂದು ಡಿಜಿಪಿ ಸಲೀಂ ಪುನರುಚ್ಚರಿಸಿದ್ದಾರೆ.

ಗೌಪ್ಯತೆ ಉಲ್ಲಂಘನೆ ಮತ್ತು ವಾಯರಿಸಂ (Voyeurism) ಅಡಿಯಲ್ಲಿ ಬಿಎನ್​ಎಸ್ (BNS) ಸೆಕ್ಷನ್ 77 ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು. ಮಾಹಿತಿ ತಂತ್ರಜ್ಞಾನ ಕಾಯ್ದೆಯ (IT Act) ಸೆಕ್ಷನ್ 66(ಇ), 67 ಮತ್ತು 67(ಎ) ಅಡಿಯಲ್ಲಿಯೂ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI ವರೆಗೆ ಮೋದಿ ಸರ್ಕಾರದ ಎಡವಟ್ಟುಗಳು

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...