ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

Date:

  • ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • ಪದೇಪದೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

ಹನಿಟ್ರ್ಯಾಪ್‌ ಜಾಲಕ್ಕೆ ಸಿಲುಕಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ ₹6.8 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಹಣ ಕಳೆದುಕೊಂಡ 58 ವರ್ಷದ ಅಧಿಕಾರಿ ಮೂಲತಃ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯಾಗಿದ್ದು, ಅವರು ಜೂ.12 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಅತಿಥಿ ಗೃಹದಲ್ಲಿದ್ದರು. ಅಲ್ಲಿ, ಸ್ನಾನ ಮುಗಿಸಿ ಹೊರ ಬಂದಾಗ ಅವರಿಗೆ ವಿಡಿಯೋ ಕಾಲ್ ಬಂದಿದೆ. ಕರೆಗೆ ಅವರು ಉತ್ತರಿಸಿದ್ದು, ಕರೆ ಮಾಡಿದ್ದ ಮಹಿಳೆ ಕರೆಯ ಸಂಭಾಷಣೆ ಮತ್ತು ವಿಡಿಯೋವನನ್ನು ರೆಕಾರ್ಡ್‌ ಮಾಡಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮರುದಿನ ಓರ್ವ ಅಪರಿಚಿತ ವ್ಯಕ್ತಿ ಅಧಿಕಾರಿಗೆ ಕರೆ ಮಾಡಿದ್ದಾನೆ. ಆದರೆ, ಅಧಿಕಾರಿ ಕರೆ ಸ್ವೀಕರಿಸಿಲ್ಲ. ಪದೇಪದೆ ಕರೆ ಬಂದ ಕಾರಣ ಕರೆಯನ್ನು ಸ್ವೀಕರಿಸಿದ್ದಾರೆ. ಈ ವೇಳೆ, ಆ ಅಪರಿಚಿತ ವ್ಯಕ್ತಿ ತಾನೂ ಮಹೇಂದ್ರ ಸಿಂಗ್ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ವರದಿಗಾರ ಎಂದು ಹೇಳಿಕೊಂಡಿದ್ದಾನೆ.

ಬಳಿಕ ಓರ್ವ ಮಹಿಳೆ ನಿಮ್ಮ ಬಗ್ಗೆ ದೂರು ನೀಡಿದ್ದಾರೆ. ನೀವು ಮಹಿಳೆಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಅನುಚಿತವಾಗಿ ವರ್ತಿಸಿದ್ದೀರಿ. ನಿಮ್ಮ ವಿಡಿಯೋ ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಬಳಿಕ ನಾವು ಕೇಳಿದಷ್ಟು ಹಣ ನೀಡಿ, ಇಲ್ಲದಿದ್ದರೆ, ನಿಮ್ಮ ವಿಡಿಯೋ ಅನ್ನು ಯೂಟ್ಯೂಬ್ ಹಾಗೂ ಫೇಸ್ ಬುಕ್‌ನಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾನೆ. ಹಣ ನೀಡಿದರೆ ವಿಡಿಯೋ ಡಿಲಿಟ್‌ ಮಾಡುವುದಾಗಿ ಹೇಳಿದ್ದನು ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ ಮೇಲೆ ಹಲ್ಲೆ; ದೂರು ದಾಖಲು

ಬಳಿಕ ಹೆದರಿದ ಅಧಿಕಾರಿ ಮೊದಲಿಗೆ ₹1.5 ಲಕ್ಷ ಹಣ ನೀಡಿದ್ದಾರೆ. ನಂತರ ₹50 ಸಾವಿರ ಆರೋಪಿ ಹೇಳಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಬಳಿಕ ಜು.14ರಂದು ಕರೆ ಮಾಡಿ ಮತ್ತೆ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಟ್ಟು ₹2 ಲಕ್ಷ ಹಾಗೂ ₹2.8 ಲಕ್ಷ ವರ್ಗಾಯಿಸುವಂತೆ ಒತ್ತಾಯಿಸಿದ್ದಾನೆ. ಒಟ್ಟು ₹6.8 ಲಕ್ಷ ಹಣವನ್ನು ಅಧಿಕಾರಿಯಿಂದ ವಂಚಕರು ಸುಲಿಗೆ ಮಾಡಿದ್ದಾರೆ.

ಮತ್ತೆ ಅದೇ ದಿನ ಕರೆ ಮಾಡಿ ₹7.2 ಲಕ್ಷ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಅಧಿಕಾರಿ ನಗರ ಪೊಲೀಸ್ ಕಮಿಷನರ್‌ ಅವರಿಗೆ ತಿಳಿಸಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...