ಡಿ ಕೆ ಸುರೇಶ್ ಸಹೋದರಿ ಹೆಸರಿನಲ್ಲಿ ವಂಚನೆ : ಚಿತ್ರನಟ ಸೇರಿ ಮೂವರ ವಿರುದ್ಧ ಎಫ್‍ಐಆರ್ ದಾಖಲು

Date:

Advertisements

ಮಾಜಿ ಸಂಸದ ಡಿ ಕೆ ಸುರೇಶ್ ಅವರ ಸಹೋದರಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ 9.82 ಕೋಟಿ ರೂ. ವಂಚಿಸಿರುವ ಆರೋಪ ಸಂಬಂಧ ನಟ ಸೇರಿ ಮೂವರ ವಿರುದ್ಧ ಇಲ್ಲಿನ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಇಲ್ಲಿನ ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ.ಮಾಜಿ ಸಂಸದರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ವನಿತಾ ಅವರಿಗೆ ಐಶ್ವರ್ಯಾ ಗೌಡ, ಹಾಗೂ ಆಕೆಯ ಪತಿ ಹರೀಶ್ ನಂಬಿಸಿದ್ದಾರೆ.

ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

Advertisements

ನಂತರ ಸಾಲದ ರೂಪದಲ್ಲಿ ಚಿನ್ನ ಪಡೆದು ಆರಂಭದಲ್ಲಿ ಕೆಲ ಬಾರಿ ಹಣ ನೀಡಿದ್ದಾರೆ. ಆದರೆ 2023 ಅಕ್ಟೋಬರ್‌ನಿಂದ 2024 ಏಪ್ರಿಲ್‍ವರೆಗೆ ಹಂತ ಹಂತವಾಗಿ ಪಡೆದಿದ್ದ ಒಟ್ಟು 14 ಕೆ.ಜಿ 660 ಗ್ರಾಂ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡದೆ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ, ಪದೇಪದೇ ಹಣ ವಾಪಾಸ್ ಕೇಳಿದಾಗ, ಧರ್ಮೇಂದ್ರ ಮೂಲಕ ಕರೆ ಮಾಡಿಸಿ ಸಂಸದರ ಧ್ವನಿಯಲ್ಲಿ ಮಾತನಾಡಿಸಿದ್ದಾರೆ.ಈ ವಿಷಯ ತಿಳಿದ ಬಳಿಕ ಐಶ್ವರ್ಯಾಗೆ ಕರೆ ಮಾಡಿ ಪಡೆದಿದ್ದ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡುವಂತೆ ಕೇಳಿದಾಗ, ಹಣ ಕೇಳಿದರೆ ಧರ್ಮೇಂದ್ರನನ್ನು ಕಳುಹಿಸಿ ಕೊಲೆ ಮಾಡಿಸುವುದಾಗಿ ಬೆದರಿಸಿದ್ದಾರೆ ಎಂದು ವನಿತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X