ಪ್ರಯಾಣಿಕರಿಂದ ₹2000 ನೋಟು ಪಡೆಯಿರಿ ಎಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ

Date:

  • ಸೆ. 30ರ ಒಳಗೆ ಬ್ಯಾಂಕುಗಳಿಗೆ ನೋಟು ಮರಳಿ ನೀಡಿ
  • ಹೊಸಕೋಟೆ ಘಟಕದಿಂದ ಮಾತ್ರ ತಪ್ಪಾದ ಆದೇಶ

ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ₹2000 ಮುಖಬೆಲೆಯ ನೋಟುಗಳನ್ನು ವಾಪಸ್ ಬಪಡೆಯುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ₹2000 ನೋಟುಗಳನ್ನು ನಿರ್ವಾಹಕರು ಪಡೆಯದಂತೆ ಕೆಲವು ಘಟಕಗಳು ಆದೇಶಿಸಿದ್ದವು. ಪರಿಣಾಮ ಬಸ್‌ಗಳಲ್ಲಿ ₹2000 ನೋಟುಗಳನ್ನು ಪಡೆಯಲು ನಿರ್ವಾಹಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಪ್ರಕಟಣೆ ಹೊರಡಿಸಿದ್ದು, ಬಸ್‌ಗಳಲ್ಲಿ ₹2000 ನೋಟುಗಳನ್ನು ಪಡೆಯಬಹುದು ಎಂದು ಸ್ಪಷ್ಟನೆ ನೀಡಿದೆ.

“ಬಿಎಂ‌ಟಿಸಿ ಕೇಂದ್ರ ಕಚೇರಿಯಿಂದ ಬಸ್ಸಿನಲ್ಲಿ ನಿರ್ವಾಹಕರು ₹2000 ನೋಟುಗಳನ್ನು ತೆಗೆದುಕೊಳ್ಳಬಾರದು ಎಂದು ಯಾವುದೇ ಆದೇಶ ಹೊರಡಿಸಿರುವುದಿಲ್ಲ. ಹೊಸಕೋಟೆ ಘಟಕದಿಂದ ಮಾತ್ರ ಈ ರೀತಿ ತಪ್ಪಾದ ಆದೇಶ ನೀಡಲಾಗಿದ್ದು, ತದನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿ‌ಸಿ ಬಸ್‌ಗಳಲ್ಲಿ ₹2000 ನೋಟುಗಳನ್ನು ಸ್ವೀಕರಿಸಲಾಗುತ್ತದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

ಆರ್‌ಬಿಐ ₹2000 ನೋಟುಗಳ ಚಲಾವಣೆಯನ್ನು ಬಂದ್‌ ಮಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಬದಲಾವಣೆ ಮಾಡಿಕ್ಕೊಳ್ಳುವಂತೆ ಸೂಚನೆ ನೀಡಿತ್ತು. ಮೇ 23ರಿಂದ ಸೆಪ್ಟೆಂಬರ್ 30ರ ಒಳಗೆ ನೋಟುಗಳನ್ನು ಬ್ಯಾಂಕುಗಳಿಗೆ ಮರಳಿ ನೀಡುವಂತೆ ಆರ್‌ಬಿಐ ಆದೇಶ ಹೊರಡಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ...

ಕಾವೇರಿ 5ನೇ ಹಂತದ ನೀರು ಬಳಕೆಗೆ ಜಲಮಂಡಳಿ ಚಿಂತನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜಲಮಂಡಳಿ ನೀರಿನ...

ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...