ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ, ಸಹಕರಿಸದಿದ್ದಾಗ ಅತ್ಯಾಚಾರ; ಇಬ್ಬರ ಬಂಧನ

Date:

Advertisements

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದು, ಸಹಕರಿಸದಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisements

ಸ್ವಿಂಗರ್ಸ್ ವಾಟ್ಸ್ ಆಪ್ ಗ್ರೂಪ್

ವಾಟ್ಸ್ ಆಪ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನ ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಎಸಗಿದ್ದ.

ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ವೇಳೆ ಭಯಾನಕ‌ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೋಗಳು ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್​ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X