ಸಚಿವರ ಆಪ್ತ ಎಂದು ಹೇಳಿ, ಜನರಿಂದ ಹಣ ಪಡೆದು ವಂಚಿಸುತ್ತಿದ್ದವನ ಬಂಧನ

Date:

Advertisements
  • ಕಡಿಮೆ ಹಣ ನೀಡಿದರೆ ನಿಗಮ, ಮಂಡಳಿಗಳಲ್ಲಿ ಮರ್ಯಾದೆ ಇರಲ್ಲ
  • ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಸಚಿವರ ಆಪ್ತ

ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಿಎ ಎಂದು ಹೇಳಿಕೊಂಡು ವ್ಯಕ್ತಿಯೊರ್ವ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ.

ಸದ್ಯ ಆ ವ್ಯಕ್ತಿಯನ್ನು ಸದಾಶಿವನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಘುನಾಥ್ ಬಂಧಿತ ವ್ಯಕ್ತಿ. ಇತನು ಅನೇಕರ ಬಳಿ ತಾನು ಸಚಿವರ ಜತೆಗೆ 10 ವರ್ಷದಿಂದ ಆಪ್ತ ಸಹಾಯಕನಾಗಿದ್ದೇನೆ ಎಂದು ಹೇಳಿಕೊಂಡಿದ್ದನು. ಹಲವು ನಿಗಮ ಹಾಗೂ ಮಂಡಳಿಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ಜನರಲ್ಲಿ ನಂಬಿಕೆ ಹುಟ್ಟಿಸಿ, ಅವರಿಂದ ಹಣವನ್ನು ಪಡೆಯುತ್ತಿದ್ದನು.

ಕೇಳಿದಷ್ಟು ಹಣ ಹಾಕಿದರೇ ಮಾತ್ರ ಹುದ್ದೆ ದೊರೆಯುತ್ತದೆ. ಕೇಳಿದಕ್ಕೂ ಕಡಿಮೆ ಹಣ ನೀಡಿದರೆ ನಿಗಮ, ಮಂಡಳಿಗಳಲ್ಲಿ ಮರ್ಯಾದೆ ಇರಲ್ಲ. ಹಾಗಾಗಿ ಕೇಳಿದಷ್ಟು ಹಣ ಕೊಡಿ ಎಂದು ಜನರಿಗೆ ಹೇಳುತ್ತಿದ್ದನು ಎಂದು ತಿಳಿದುಬಂದಿದೆ.

Advertisements

ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಬೇಕಾದವರೂ ಹಣವನ್ನು 9980823165 ಈ ನಂಬರ್​ಗೆ ಗೂಗಲ್ ಪೇ ಮಾಡಿ ಎಂದು ಹೇಳುತ್ತಿದ್ದನು. ಕೆಲವೊಂದು ಬಾರಿ 6361231868 ಮೊಬೈಲ್ ಸಂಖ್ಯೆಯಿಂದ ಕೆಲ ಮುಖಂಡರಿಗೆ ಕರೆ ಕೂಡ ಮಾಡಿದ್ದನು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ; ಕುತೂಹಲ ಕೆರಳಿಸಿದ ಬೆಳವಣಿಗೆ

ಕಾಂಗ್ರೆಸ್​ನ ಗೀತಾ ಶಿವರಾಮ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರಿಗೆ ರಘುನಾಥ್ ಎಂಬ ವ್ಯಕ್ತಿ ಸಚಿವರ ಹೆಸರು ಹೇಳಿಕೊಂಡು ಈ ರೀತಿ ಜನರಿಗೆ ಮೋಸ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ನಂತರ ಈ ಬಗ್ಗೆ ಪ್ರಿಯಾಂಕ್ ಖರ್ಗೆಯವರ ಆಪ್ತ ಸಹಾಯಕ ಕೇಶವ್ ಮೂರ್ತಿಯವರಿಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಮುಖಂಡರ ಮಾಹಿತಿ ಆಧಾರದ ಮೇಲೆ ಕೇಶವ್ ಮೂರ್ತಿ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ವೇಳೆ ಆರೋಪಿ ಅನೇಕರ ಬಳಿ ಸುಳ್ಳು ಆಸೆ ತೋರಿಸಿ ಹಣ ಪಡೆದಿರುವ ಬಗ್ಗೆ ಮಾಹಿತಿ ದೊರಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X