ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಸೂರ್ಯನ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೆಯೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬಾಗಲಕೋಟೆ , ಬೀದರ್, ಕಲಬುರಗಿ,ರಾಜಚೂರು ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವುದರಿಂದ ಎಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಸಹಜ ತಾಪಮಾನಕ್ಕಿಂತ 6 ರಿಂದ 8 ಡಿಗ್ರಿ ಸೆಲಿಸ್ಸಿಯಸ್ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಈಗಾಗಲೇ 32 ರಿಂದ 34 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಮುಂದಿನ ಎರಡೂ ದಿನಗಳಲ್ಲಿ 36-38 ಡಿಗ್ರಿ ತಾಪಮಾನಕ್ಕೆ ಏರಿಕೆಯಾಗಲಿದೆ. ಈ ತಿಂಗಳ ಅಂತ್ಯಕ್ಕೆ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಹವಮಾನ ಇಲಾಖೆ ಗರಿಷ್ಠ ತಾಪಮಾನದ ಅಲರ್ಟ್ ನೀಡಿದ್ದು, ಕಳೆದ ವರ್ಷವೂ ನಗರದಲ್ಲಿ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ವರ್ಷವೂ 39 ರಿಂದ 40 ಡಿಗ್ರಿಯಷ್ಟು ತಾಪಮಾನದ ಎಚ್ಚರಿಕೆಯನ್ನ ಹವಮಾನ ಇಲಾಖೆ ನೀಡಿದೆ. ಜನರು ಹೆಚ್ಚು ಬಿಸಿಲಿನಲ್ಲಿ ಓಡಾಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದ್ದು ಬಿಸಿ ಗಾಳಿ ಬಗ್ಗೆಯೂ ಎಚ್ಚರಿಕೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!
ಈಗಾಗಲೇ ರಾಜ್ಯದ ಎರಡೂ ಜಿಲ್ಲೆಗಳಾದ ಮಂಗಳೂರು ಹಾಗೂ ಕಲಬುರಗಿಯಲ್ಲಿ ಬಿಸಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನ ಜನತೆ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಮಾನ ಇಲಾಖೆ ಸಲಹೆ ನೀಡಿದೆ.
ಈ ಬೇಸಿಗೆ ವೇಳೆ ಸಾಮಾನ್ಯವಾಗಿ ಮಕ್ಕಳು ಹಾಗೂ ವೃದ್ಧರಿಗೆ ಹೆಚ್ಚು ಆರೋಗ್ಯದ ಸಮಸ್ಯೆ ಕಾಡಲಿದೆ. ಈ ಹಿನ್ನೆಲೆ ಜನರು ಹೆಚ್ಚು ನೀರು ಕುಡಿಯಬೇಕು. ಹಣ್ಣುಗಳನ್ನು ಸೇವಿಸಬೇಕು. ಜನರು ಬಿಸಿಲಿಗೆ ಹೆಚ್ಚು ಮೈ ಒಡ್ಡಬಾರದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.
