ಬೆಂಗಳೂರಿನ ಹಲವೆಡೆ ಜೋರು ಮಳೆ: ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ

Date:

Advertisements

ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗಿದೆ.

ರಾಜಾಜಿ ನಗರ, ಮಲ್ಲೇಶ್ವರಂ, ಸಿಲಿಕಾನ್ ಸಿಟಿಯ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​ ಸೇರಿದಂತೆ ಹಲವು ಕಡೆ ವಿಪರೀತ ಮಳೆಯಾಗಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ವಿಧಾನಸೌಧ, ಕಸ್ತೂರಿ ಬಾ ರಸ್ತೆ, ಮಲ್ಯ ರಸ್ತೆಯಲ್ಲೂ ವರಣನ ಆರ್ಭಟವಿತ್ತು. ಸಂಜೆಯ ಮಳೆ ರಾತ್ರಿ ಕೂಡ ಮುಂದುವರೆಯುವ ಸಾಧ್ಯತೆ ಇದೆ.

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳವರೆಗೆ ಮಳೆ ಅಲರ್ಟ್ ಘೋಷಿಸಿದೆ. ಸಂಜೆ ವೇಳೆಗೆ ಭಾರೀ ಮಳೆಯಾಗಲಿದ್ದು,ಜೂನ್ 14ರವರೆಗೆ ಮಳೆ ಮುಂದುವರಿಯಲಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

ಕೆಲವು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮತ್ತು ಮಂಡ್ಯ ಸೇರಿದಂತೆ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X