ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ ಮೇಲೆ ಕಸದ ರಾಶಿ ತುಂಬಿದ್ದು, ಕೆರೆಯ ತುಂಬ ಗಿಡ-ಗಂಟಿಗಳು ಬೆಳೆದಿದ್ದವು. ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್ ವರದಿ ಮಾಡಿತ್ತು.
ವರದಿಯಿಂದ ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕೆರೆಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಎಂಜಿನಿಯರ್ (ಕೆರೆ) ವಿಜಯಕುಮಾರ್ ಹರಿದಾಸ್, “ಚುಂಚಘಟ್ಟ ಕೆರೆಯ ಸುತ್ತ ಬೆಳೆದಿರುವ ಗಿಡಗಳನ್ನು ತೆರವು ಮಾಡಲಾಗುತ್ತಿದೆ. ಹಾಗೂ ಕೆರೆಯ ದಂಡೆ ಮೇಲೆ ಹಾಕಿರುವ ಕಸವನ್ನು ಸ್ವಚ್ಛಗೊಳಿಸಲಾಗುತ್ತದೆ” ಎಂದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.