ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

Date:

  • 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ₹100 ಕೋಟಿ ಬಿಡುಗಡೆ
  • ಜನರಿಗೆ ಸೇವೆ ನೀಡಲು 1533 ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಿದ ಬಿಬಿಎಂಪಿ

ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಬಿಡುಗಡೆ ಮಾಡಿದೆ. ಕ್ಯಾಂಟೀನ್‌ನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹಾಗಾಗಿ, ಉಂಟಾಗಿರುವ ಅವ್ಯವಸ್ಥೆ ಸರಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ನೇಮಕ ಮಾಡಲು ಮುಂದಾಗಿದೆ.

- Advertisement -

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತಿಚೆಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ವೇಳೆ ಊಟ ಮತ್ತು ತಿಂಡಿಗೆ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ತಿಳಿದುಬಂದಿದೆ. ಹಾಗಾಗಿ, ಬಿಬಿಎಂಪಿ ನಗರದಲ್ಲಿರುವ ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪಾಲಿಕೆಯ ಅಧಿಕಾರಿ ನೇಮಕ ಮಾಡಲು ತಿರ್ಮಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಸೇರಿದಂತೆ ಸ್ವಚ್ಛತೆಯ ಬಗ್ಗೆ ನಿಗಾ ವಹಿಸಲು ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲು ಮುಂದಾಗಿದೆ. ಜತೆಗೆ ಜನರಿಗೆ ಸೇವೆ ನೀಡಲು 1533 ಹೊಸ ಸಹಾಯವಾಣಿ ರೂಪಿಸಲಾಗಿದ್ದು, ಎಲ್ಲ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಲಾಗಿದೆ.  

ಈ ಸುದ್ದಿ ಓದಿದ್ದೀರಾ? ಬ್ಯಾಂಕುಗಳ ಹಣ ಬಂಡವಾಳಿಗರ ಸಾಲ ಮನ್ನಾಗೆ ಬಳಕೆಯಾಗಬಾರದು: ಸಿ.ಹೆಚ್ ವೆಂಕಟಾಚಲಂ

ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ ಇಡಲು ಪಾಲಿಕೆ ಮಾರ್ಷಲ್ಸ್‌ ಮತ್ತು ಅಧಿಕಾರಿಗಳ ತಂಡ ರಚನೆ ಮಾಡಿದೆ.ಈ ತಂಡ ರಸ್ತೆಬದಿ ಕಸ ಹಾಕುವವರು, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ನಿಗಾ ವಹಿಸಲಿದೆ.

ಟೆಂಡರ್‌ ಕರೆಯಲು ಅನುಮತಿ ನೀಡಿದ ರಾಜ್ಯ ಸರ್ಕಾರ

ಇಂದಿರಾ ಕ್ಯಾಂಟೀನ್‌ಗಳ ಪುನರುಜ್ಜೀವನಕ್ಕಾಗಿ ಟೆಂಡರ್‌ ಕರೆಯಲು ರಾಜ್ಯ ಸರ್ಕಾರದಿಂದ ಬಿಬಿಎಂಪಿ ಅನುಮೋದನೆ ಪಡೆದುಕೊಂಡಿದೆ. ಉತ್ತಮ ಗುಣಮಟ್ಟದ ಸೇವೆ ನೀಡಲು ಪಾಲಿಕೆಯು ಯೋಜನೆ ರೂಪಿಸಿದ್ದು, ವಲಯಕ್ಕೆ ಒಂದರಂತೆ ಒಟ್ಟು ಎಂಟು ಪ್ಯಾಕೇಜ್‌ಗಳಾಗಿ ವಿಭಜಿಸಲು ಯೋಜಿಸಿದೆ.

“ಸಬ್ಸಿಡಿ ದರದಲ್ಲಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಒದಗಿಸುವ 200 ಕ್ಯಾಂಟೀನ್‌ಗಳನ್ನು ನಡೆಸಲು ಬಿಬಿಎಂಪಿಗೆ ದಿನಕ್ಕೆ ₹31 ಲಕ್ಷ ಬೇಕಾಗುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಟೆಂಡರ್‌ ಕರೆಯುತ್ತೇವೆ. ಟೆಂಡರ್‌ ಅನುಮೋದಿಸುವುದರ ಜೊತೆಗೆ, 50 ಹೊಸ ಕ್ಯಾಂಟೀನ್‌ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದೆ” ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.

ಪ್ರಸ್ತುತ ನಗರದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸುವ ಜವಾಬ್ದಾರಿಯನ್ನು ಎರಡು ಸಂಸ್ಥೆಗಳಿಗೆ ವಹಿಸಲಾಗಿದೆ. ಆಹಾರದ ಕೊರತೆಯ ಜೊತೆಗೆ, ಕ್ಯಾಂಟೀನ್‌ಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸುತ್ತಿವೆ ಎಂಬ ದೂರುಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...