ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾ ಗಾಂಧಿ ಜೈವಿಕ ಉದ್ಯಾನ: ಸಚಿವ ಈಶ್ವರ ಖಂಡ್ರೆ

Date:

Advertisements
  • ಜೈವಿಕ ಉದ್ಯಾನದಲ್ಲಿ ಬಸವಣ್ಣ ದಿವ್ಯೌಷಧ ಸಸ್ಯವನ, ಅಂಬೇಡ್ಕರ್ ಪಕ್ಷಿಲೋಕ
  • ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ, ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ

ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ ಹಾಗೂ ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸೋಮವಾರ ಮಾದಪ್ಪನಹಳ್ಳಿ ನೆಡುತೋಪಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವರು, “ಬೆಂಗಳೂರು ಉತ್ತರ ಭಾಗದಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಯಾವುದೇ ಸಸ್ಯೋದ್ಯಾನವಿಲ್ಲ. ಹೀಗಾಗಿ ಇಲ್ಲಿ ಅರಣ್ಯ ಭೂಮಿಯಲ್ಲಿ ಇಂದಿರಾಗಾಂಧಿ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ” ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

“ಈ ಪ್ರದೇಶದಲ್ಲಿ ನೆಡಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಅಲ್ಲಿ ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಜ್ಞಾನ ಸಿಂಚನ ಮಾಡಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

Advertisements

ಅತ್ಯಗತ್ಯವಾದ ಶ್ವಾಸ ತಾಣ

“ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

“ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧಿ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ. ಜೊತೆಗೆ ಬೆಂಗಳೂರಿನ ಈ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ (ಲಂಗ್ಸ್ ಸ್ಪೇಸ್) ಲಭಿಸಿದಂತಾಗುತ್ತದೆ” ಎಂದು ವಿವರಿಸಿದರು.

ನವೆಂಬರ್ ಅಂತ್ಯಕ್ಕೆ ಶಂಕುಸ್ಥಾಪನೆ

“ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು” ಎಂದು ಈಶ್ವರ ಖಂಡ್ರೆ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಧಾ ದೇವಿ, ಶಿವಶಂಕರ್, ರವೀಂದ್ರ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X