ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ ?

Date:

Advertisements
ಕೇಂದ್ರ ಸರ್ಕಾರವು ರಾಷ್ಟ್ರದ ಭದ್ರತೆಗೆಂದೇ ರಾಜ್ಯಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಷ್ಟ್ರದ ಭದ್ರತೆ ಎಂದರೆ ಏನು ? ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆದರೆ ಅದು ರಾಷ್ಟ್ರೀಯ ಭದ್ರತೆ ವಿಫಲದ ವ್ಯಾಪ್ತಿಯಲ್ಲಿ ಬರುವುದಿಲ್ಲವೇ ?

 

ಬಾಂಬ್ ಬ್ಲಾಸ್ಟ್ ಅನ್ನುವುದು ಕರ್ನಾಟಕಕ್ಕೆ ಇದೇನು ಮೊದಲಲ್ಲ. ಈ ಹಿಂದೆಯೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಾಂಬ್ ಬ್ಲಾಸ್ಟ್ ಪ್ರಕರಣಗಳು ದಾಖಲಾಗಿದೆ. ಆದರೆ ಈ ಬಾರಿ ಮಾತ್ರ ಎನ್ಐಎಗಿಂತಲೂ ಬಿಜೆಪಿ ಹೆಚ್ಚು ಕ್ರೀಯಾಶೀಲವಾಗಿ ವಿಚಾರಣೆ ನಡೆಸತೊಡಗಿದೆ. ಬಾಂಬ್ ಬ್ಲಾಸ್ಟ್ ಆದ ಕೆಲವೇ ಗಂಟೆಗಳಲ್ಲಿ ಬಿಜೆಪಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ದುರಂತ ! ಈ ಹಿಂದೆಯೂ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರೂ, ಸ್ಪೋಟದ ಹೊಗೆ ಆರುವ ಮೊದಲೇ ಬಿಜೆಪಿ ತನ್ನ ರಾಜಕೀಯ ಹಪಾಹಪಿಯನ್ನು ಬಹಿರಂಗವಾಗಿ ತೋರಿಸಿದ್ದು ಇದೇ ಮೊದಲು !

ಬಾಂಬ್ ಬ್ಲಾಸ್ಟ್ ಪ್ರಕರಣ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಉದಾಹರಣೆಯಾಗುವುದು ಹೇಗೆ ? ಭಯೋತ್ಪಾದನೆ ಎಂಬುದು ರಾಷ್ಟ್ರೀಯ ವಿಷಯ. ನಕ್ಸಲ್ ಮತ್ತು ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುವ ಬಂಡಾಯ ಮಾದರಿಯ ಭಯೋತ್ಪಾದನೆ (?)ಗೆ ಮಾತ್ರ ರಾಜ್ಯ ಸರ್ಕಾರ ಜವಾಬ್ದಾರಿ. ಕರ್ನಾಟಕದಲ್ಲಿ ಸಧ್ಯ ಅಂತಹ ಮಾದರಿಯ ಬಂಡಾಯವೇ ಇಲ್ಲ. ಹಾಗಿರುವಾಗ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬ್ಲಾಸ್ಟ್ ಭಯೋತ್ಪಾದನೆಯೇ ಆಗಿದ್ದರೆ ಅದು ಖಂಡಿತವಾಗಿಯೂ ಕೇಂದ್ರ ಸರ್ಕಾರದ ವೈಫಲ್ಯವಾಗುತ್ತದೆ. ಎನ್ಐಎಯ ಸಂಪೂರ್ಣ ಹಿಡಿತ ಹೊಂದಿರುವುದು ಕೇಂದ್ರ ಸರ್ಕಾರ. ಎನ್ಐಎ, ರಾ ಸೇರಿದಂತೆ ಹಲವು ಗೂಢಾಚಾರ ಸಂಸ್ಥೆಗಳು ಇಂತಹ ಭಯೋತ್ಪಾದನಾ ನಿಗ್ರಹಕ್ಕೆಂದೇ ಕೆಲಸ ಮಾಡುತ್ತಿದೆ. ಅದರ ಜವಾಬ್ದಾರಿಯ ನಿರ್ವಹಣೆಯಲ್ಲಿ ಆಗಿರುವ ವೈಫಲ್ಯವಲ್ಲವೇ ? ಅಂತರರಾಜ್ಯ, ಅಂತರರಾಷ್ಟ್ರೀಯ ಭಯೋತ್ಪಾಧನೆಯನ್ನು ಗುಪ್ತಚರ ಮಾಹಿತಿ ಮೂಲಕ ಕಂಡು ಹಿಡಿದು ನಿಯಂತ್ರಿಸುವಂತಹ ಸಾಮರ್ಥ್ಯ ಯಾವುದಾದರೂ ರಾಜ್ಯದ ಪೊಲೀಸ್ ಇಲಾಖೆಗೆ ಇರುತ್ತದೆಯೇ ? ಅಂತಹ ಸಾಮರ್ಥ್ಯ ಮತ್ತು ವ್ಯವಸ್ಥೆ ಇರುವುದು ಎನ್ಐಎ ಮತ್ತು ರಾ ದಂತಹ ಕೇಂದ್ರದ ಸಂಸ್ಥೆಗಳಿಗೆ ಮಾತ್ರ !

ಕೇಂದ್ರ ಸರ್ಕಾರವು ರಾಷ್ಟ್ರದ ಭದ್ರತೆಗೆಂದೇ ರಾಜ್ಯಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಷ್ಟ್ರದ ಭದ್ರತೆ ಎಂದರೆ ಏನು ? ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆದರೆ ಅದು ರಾಷ್ಟ್ರೀಯ ಭದ್ರತೆ ವಿಫಲದ ವ್ಯಾಪ್ತಿಯಲ್ಲಿ ಬರುವುದಿಲ್ಲವೇ ?

Advertisements

ಹಾಗಾಗಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬ್ಲಾಸ್ಟ್ ಬಾಂಬ್ ಬ್ಲಾಸ್ಟ್ ಹೌದಾದರೆ, ಅದು ಭಯೋತ್ಪಾದನೆಯ ಕೃತ್ಯವೇ ಹೌದಾದರೆ ಕೇಂದ್ರ ಸರ್ಕಾರ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಸ್ಪಷ್ಟವಾಗಿ ವಿಫಲವಾಗಿದೆ. ವಾಸ್ತವವಾಗಿ ಇಂತಹ ಘಟನೆಗಳು ನಡೆದಾಗ ರಾಜಕೀಯ ಪಕ್ಷಗಳು ಮೌನವಾಗಿದ್ದುಕೊಂಡು ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಆದರೆ ಸ್ಫೋಟದ ಹೊಗೆ ಆರುವ ಮೊದಲೇ ಅದರ ಹಿಂದೆ ರಾಜಕೀಯ ಚರ್ಚೆ ಶುರುವಾದ್ದರಿಂದ ಜವಾಬ್ದಾರಿಯ ಬಗ್ಗೆ ವಿಮರ್ಶೆ ನಡೆಯಬೇಕಿದೆ.

ಸೂರಿಂಜೆ 1
ನವೀನ್‌ ಸೂರಿಂಜೆ
+ posts

ಪತ್ರಕರ್ತ, ಲೇಖಕ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ನವೀನ್‌ ಸೂರಿಂಜೆ
ನವೀನ್‌ ಸೂರಿಂಜೆ
ಪತ್ರಕರ್ತ, ಲೇಖಕ

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X