ಬೆಂಗಳೂರು | ಇಸ್ರೋ ವಿಜ್ಞಾನಿ ಮೇಲೆ ರಸ್ತೆ ಮಧ್ಯೆ ಸ್ಕೂಟರ್ ಸವಾರನಿಂದ ಹಲ್ಲೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಯೊಬ್ಬರು ಕೆಲಸಕ್ಕೆ ತೆರಳುತ್ತಿದ್ದ ವೇಳೆ, ರಸ್ತೆಯ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಜೆಬಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

- Advertisement -

ಆಗಸ್ಟ್ 29ರಂದು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಎಚ್‌ಎಎಲ್ ಅಂಡರ್‌ಪಾಸ್ ಬಳಿ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಇಸ್ರೋ ವಿಜ್ಞಾನಿ ಆಶಿಶ್ ಲಂಬಾ ಅವರು ಎಕ್ಸ್ (ಟ್ವಿಟರ್)ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, “ಇಸ್ರೋ ಕಚೇರಿಗೆ ತೆರಳುತ್ತಿದ್ದಾಗ, ಹೆಲ್ಮೆಟ್ ಧರಿಸದೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುತ್ತಿದ್ದರು. ನಮ್ಮ ಕಾರಿನ ಮುಂದೆ ಇದ್ದಕ್ಕಿದ್ದಂತೆ ಬಂದಾಗ, ನಾನು ಸಡನ್ ಬ್ರೇಕ್ ಹಾಕಿದೆ. ಬಳಿಕ ಸ್ಕೂಟರ್ ಸವಾರ ನನ್ನ ಕಾರಿನ ಮುಂದೆ ವಾಹನ ನಿಲ್ಲಿಸಿದನು” ಎಂದು ಬರೆದುಕೊಂಡಿದ್ದಾರೆ.

“ವಾಹನ ಸವಾರ ಕಾರಿನ ಮುಂದೆ ಬಂದು ಜಗಳವಾಡಲು ಪ್ರಾರಂಭಿಸಿದರು. ಅವರು ನನ್ನ ಕಾರನ್ನು ಎರಡು ಬಾರಿ ಒದ್ದರು. ದಯವಿಟ್ಟು ಅಗತ್ಯ ಕ್ರಮ ಕೈಗೊಳ್ಳಿ” ಎಂದು ನಗರ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಆಶಿಶ್ ಅವರು ತಮ್ಮ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಹಿಡಿದ ವಿಡಿಯೊ ತುಣುಕನ್ನು ಮತ್ತು ಚಿತ್ರಗಳನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಟ್ಟಡದಿಂದ ಬಿದ್ದು ಉದ್ಯಮಿ ಅನುಮಾನಾಸ್ಪದ ಸಾವು

ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಇಂತಹ ವರ್ತನೆಯ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ಈ ಘಟನೆಗೆ ಸಂಬಂಧಿಸಿದಂತೆ ಜೆಬಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ” ಎಂದು ಬೆಂಗಳೂರು ನಗರ ಪೊಲೀಸ್‌ ಟ್ವೀಟ್‌ ಮಾಡಿದೆ.

ಈ ಘಟನೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡಿದ್ದಕ್ಕೆ ಇಸ್ರೋ ವಿಜ್ಞಾನಿ ಬೆಂಗಳೂರು ಪೊಲೀಸರಿಗೆ ಧನ್ಯವಾದ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...