ಚುನಾವಣಾ ಆಯೋಗಕ್ಕೆ ವ್ಯಂಗ್ಯಚಿತ್ರ ಕಳುಹಿಸಲು ಜನವರಿ 19 ಕೊನೆ ದಿನ

Date:

ಇನ್ನೇನು ಕೆಲವೇ ತಿಂಗಳುಗಳಲ್ಲಿ 2024ರ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಲು ಜನವರಿ 19 ಕೊನೆ ದಿನಾಂಕವಾಗಿದೆ.

“ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರ ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ನಡೆಯಲಿರುವ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ” ಎಂದು ಹೇಳಿದೆ.

ಮುಂಬರುವ 2024 ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಜತೆಗೆ, ಆ ವ್ಯಂಗ್ಯ ಚಿತ್ರಗಳಿಗೆ ಗೌರವಧನ ಸಹ ನೀಡಲಾಗುತ್ತದೆ.

ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಮೂವರು ಕಾಮುಕರು: ದೂರು ದಾಖಲು

ಷರತ್ತು ಹಾಗು ನಿಬಂಧನೆಗಳು

  • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು.
  • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
  • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
  • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
  • ಚಿತ್ರಗಳನ್ನು [email protected] ವಿಳಾಸಕ್ಕೆ ಕಳುಹಿಸಬೇಕು ಹಾಗೂ ಇಮೇಲ್‌ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
  • ಚಿತ್ರಗಳನ್ನು ಜನವರಿ 19ರಂದು ಸಂಜೆ 5 ಗಂಟೆ ಒಳಗಾಗಿ ಕಳುಹಿಸಬೇಕು.
  • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅವರಿಗೆ ಇರುತ್ತದೆ.
  • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ಜನವರಿ 21 ರಂದು ಬೆಳಗ್ಗೆ 9 ಗಂಟೆಗೆ ಹಾಜರಿರಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...