ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

Date:

Advertisements

ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫಾರಸ್ಸು ಮಾಡಲಿಲ್ಲವಾ? ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2022 ರಲ್ಲಿ 32,457 ಹೃದಯಾಘಾತ 2021ರಲ್ಲಿ 28,413 ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಲಸಿಕೆ ಪಡೆದ ನಂತರ 2022 ರಲ್ಲಿ 30 ವರ್ಷದೊಳಗಿನ 3,329 ಯುವಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ನಿಷೇಧಿಸಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಕೋವ್ಯಾಕ್ಸಿನ್ ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.

Advertisements

ವಿಶ್ವದ ಅತಿ ದೊಡ್ಡ ಲಸಿಕೆ ಕಾರ್ಯಕ್ರಮದಲ್ಲಿ ಅತಿ ದೊಡ್ಡ ಹಗರಣ ನಡೆದಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕೋವಿಶೀಲ್ಡ್ ಹಾಕಿಸಿಕೊಳ್ಳುವ ಕಾರಣ ರಕ್ತ ಹೆಪ್ಪುಗಟ್ಟುತ್ತದೆ ಎಂದು ಅಸ್ಟ್ರಾಜನಿಕ ಒಪ್ಪಿಕೊಂಡಿದೆ. ಇಷ್ಟು ಗಂಭೀರ ಅಡ್ಡಪರಿಣಾಮ ಇದ್ದಾಗ ಹೇಗೆ ಲಸಿಕೆ ಹಾಕಲು ಒಪ್ಪಿಗೆ ನೀಡಿದಿರಿ? ಇವತ್ತು ತಮ್ಮಿಂದಾದ ತಪ್ಪನ್ನು ಒಪ್ಪಿಕೊಳ್ಳಲು ಕೂಡ ಮೋದಿ ಸಿದ್ದವಾಗಿಲ್ಲ, ಕೆಲವು ವೈದ್ಯರಿಗೆ ಹಣ ನೀಡಿ ಅಡ್ಡ ಪರಿಣಾಮ ಇಲ್ಲ ಎಂದು ಹೇಳಿಸುತ್ತಿದ್ದಾರೆ. ಹೃದಯಾಘಾತದ ಸಂಖ್ಯೆ ಕಣ್ಣು ಮುಂದೆ ಇದೆ. ಸರ್ಕಾರ ತಮ್ಮ ತಪ್ಪು ಒಪ್ಪಿಕೊಂಡು, ಲಸಿಕೆ ಪಡೆದುಕೊಂಡ ಬಳಿಕ, ಹೃದಯಾಘಾತದಿಂದ ಸಾವನ್ನಪ್ಪಿದ ಜನರಿಗೆ ಲಸಿಕಾ ಕಂಪನಿಯಿಂದ ಪರಿಹಾರ ಕೊಡಿಸಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಅಷ್ಟು ಆರೋಗ್ಯವಾಗಿದ್ದು, ಸದೃಢರಾಗಿದ್ದ ಪುನೀತ್ ರಾಜ್‌ಕುಮಾರ್ ಕೂಡ ಇದ್ದಕ್ಕಿದ್ದಂತೆ ಹೃದಯಾಘತದಿಂದ ಸಾವನ್ನಪ್ಪುತ್ತಾರೆ ಎಂದರೆ ಇದು ಕೂಡ ಒಂದು ಕಾರಣ ಇರಬಹುದಲ್ಲವಾ ಎಂದು ಅನುಮಾನ ವ್ಯಕ್ತಪಡಿಸಿದರು.

ಎಎಪಿ ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕೋವಿಶೀಲ್ಡ್ ತಯಾರಿಸಿದ್ದ ಅಸ್ಟ್ರಾಜನಿಕಾ ಕಂಪನಿ ಮೇಲೆ ಪ್ರಕರಣ ದಾಖಸಿದ ಬಳಿಕ, ಕಂಪನಿ ಅಂತಿಮವಾಗಿ ತಮ್ಮ ಔಷಧಿಯಿಂದ ಅಡ್ಡ ಪರಿಣಾಮ ಇದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ವಿಶ್ವಸಂಸ್ಥೆಯವರು ಕೂಡ ಲಸಿಕೆಯಿಂದ ಅಡ್ಡ ಪರಿಣಾಮ ಇದ್ದು ಜನರಿಗೆ ಮಾಹಿತಿ ನೀಡುವಂತೆ ತಿಳಿಸಿದರೂ, ಕೇಂದ್ರ ಸರ್ಕಾರ ಮಾತ್ರ ಔಷಧಿಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ವಾದಿಸಿತು. ಲೋಕಸಭೆಯಲ್ಲೇ ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡಿತ್ತು ಎಂದರು.

ಯಾವುದೇ ಲಸಿಕೆಯಾದರೂ ಅಡ್ಡ ಪರಿಣಾಮ ಇರುತ್ತದೆ. ಆದರೆ ಯಾಕೆ ಭಾರತದಲ್ಲಿ 80 ಪ್ರತಿಶತ ಜನಕ್ಕೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಭಾರತದ ಕೋವ್ಯಾಕ್ಸಿನ್ ಅನ್ನು ಯಾಕೆ ಶಿಫಾರಸ್ಸು ಮಾಡಲಿಲ್ಲ, ಅಸ್ಟ್ರಾಜನಿಕಾ ಕಂಪನಿ ಯಾಕೆ ₹50 ಕೋಟಿ ಚುನಾವಣಾ ಬಾಂಡ್ ಖರೀದಿ ಮಾಡಿದೆ ಎಂದು ಪ್ರಶ್ನಿಸಿದರು.

₹35 ಸಾವಿರ ಕೋಟಿ ಜನಗಳ ದುಡ್ಡು ಖರ್ಚು ಮಾಡಿ ಲಸಿಕೆ ನೀಡಲಾಗಿದೆ. ಯಾಕೆ ಇದೇ ಕಂಪನಿಯ ಲಸಿಕೆಯನ್ನು ಕೇಂದ್ರ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಸಮಸ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

Download Eedina App Android / iOS

X