ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

Advertisements

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ 13ರ ಬಾಲಕನ್ನು ಬಳಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಲಸದ ನಿಮಿತ್ತ ದುಬೈಗೆ ತೆರಳಿದ್ದ ಬಾಲಕನ ಪೋಷಕರು ಬಾಲಕ ಸದಾ ಮಂಕಾಗಿರುವುದನ್ನು ಕಂಡು ಮನೋವೈದ್ಯರ ಬಳಿ ಕರೆದುಕೊಂಡು ಹೊಗಿದ್ದಾರೆ. ಆಗ ತನ್ನನ್ನು ನೆರೆಮನೆಯ ಮಹಿಳೆ ಬೆದರಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವುದನ್ನು ಬಾಲಕನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಮಹಿಳೆಯು ತನ್ನ ಮನೆಯಲ್ಲಿ ಬೆಳೆದಿರುವ ನುಗ್ಗೇಕಾಯಿ ಕೊಡುತ್ತೇನೆಂದು ಬಾಲಕನನ್ನು ಪದೇ ಪದೇ ಕರೆಸಿಕೊಂಡು ಅವನನ್ನು ಬಲವಂತವಾಗಿ ತನ್ನ ತೃಷೆಗೆ ಬಳಸಿಕೊಂಡಿದ್ದಾಳೆ ಎಂದು ಬಾಲಕ ಹೇಳಿಕೊಂಡಿದ್ದಾನೆ. ಇದನ್ನು ತಿಳಿದ ಬಾಲಕನ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

Advertisements

ಆದರೆ ಆರೋಪಿತ ಮಹಿಳೆಯು, “ನನ್ನ ವಿರುದ್ದ ಬೆಂಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಮಾಡಬೇಕು” ಎಂದು ಕೋರಿ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಳು.

ಮಹಿಳೆ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದ್ದು, “ಪೋಕ್ಸೋ ಕಾಯ್ದೆಗೆ ಯಾವುದೇ ಲಿಂಗ ಬೇಧವಿಲ್ಲ. ಅಪ್ರಾಪ್ತ ವಯೋಮನದ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ರೂಪಿಸಿರುವ ಕಠಿಣ ಕಾನೂನು ಶಾಸನವಾಗಿದೆ” ಎಂದು ಮಹಿಳೆಯ ವಿರುದ್ದದ ಲೈಂಗಿಕ ಆರೋಪವನ್ನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

“ಕಾನೂನಿನ ಅಡಿಯಲ್ಲಿ ಪುರುಷ ಮತ್ತು ಮಹಿಳೆಗೆ ಸಮಾನ ಸ್ಥಾನವಿದೆ. 18 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪೋಕ್ಸೊ ಕಾಯ್ದೆಯಡಿಲ್ಲಿ ಸೂಕ್ತ ರಕ್ಷಣೆ ದೊರೆಯಬೇಕು” ಎಂದು ನ್ಯಾಯಾಲಯವು ಸಮರ್ಪಕ ರೀತಿಯಲ್ಲಿ ವ್ಯಾಖ್ಯಾನ ನೀಡಿದೆ.

“ಅಮಾಯಕ ಜೀವಗಳ ಮೇಲೆ ಕಾಮಾಂಧರು ಎಸಗುವ ಪೈಶಾಚಿಕ ಕೃತ್ಯಗಳನ್ನು ನಿರ್ದಾಕ್ಷಿಣ್ಯವಾಗಿ ತಡೆಗಟ್ಟುವುದಕ್ಕಾಗಿಯೇ ನಮ್ಮ ಶಾಸಕಾಂಗ ಪೋಕ್ಸೋದಂತಹ ಮಹತ್ತರ ಕಾಯ್ದೆಯನ್ನು ವಿನ್ಯಾಸಗೊಳಿಸಿದೆ ಎಂಬುದನ್ನು ಯಾರೂ ಮರೆಯಬಾರದು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

Download Eedina App Android / iOS

X